ಅಮೃತ್ಪಾಲ್ ಹಾಗೂ ಆತನ 'ವಾರಿಸ್ ಪಂಜಾಬ್ ದೇ' ಸಂಘಟನೆ ವಿರುದ್ಧ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಈ ವೇಳೆ ಅಮೃತ್ಪಾಲ್ ಪರಾರಿಯಾಗಿದ್ದ. ಈ ಸಂಬಂಧ ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನಾ, ಗುರ್ದೀಪ್ ಸಿಂಗ್ ಅಲಿಯಾಸ್ ದೀಪ, ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮತ್ತು ಗುರ್ಭೆಜ್ ಸಿಂಗ್ ಅಲಿಯಾಸ್ ಭೆಜಾ ಎಂಬವರನ್ನು ಬಂಧಿಸಲಾಗಿದೆ ಎಂದು ಗಿಲ್ ಹೇಳಿದ್ದಾರೆ.