ನದಿಯಲ್ಲಿ ನೀರಿನ ಮಟ್ಟ ಏರಿದ್ದರಿಂದ ಇನ್ನೊಂದು ಬದಿಯಲ್ಲಿ ಮಕ್ಕಳು ಸಿಲುಕಿದ್ದರು. ಗುರುವಾರ ಬೆಳಗ್ಗೆ 9 ಗಂಟೆ ವೇಳೆಗೆ ಅವರು ನದಿ ದಾಟಿದ್ದರು. ಆದರೆ 10 ಗಂಟೆಯ ವೇಳೆಗೆ ನದಿಯ ನೀರಿನ ಮಟ್ಟ ಏರಿತ್ತು. ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿದ ಎಸ್ಡಿಆರ್ಎಫ್ ತಂಡ ಮಕ್ಕಳನ್ನು ರಕ್ಷಿಸಿದೆ ಎಂದು ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವಿಕ್ರಮ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.