ಕಾಂಗ್ರೆಸ್ ಖಂಡನೆ: ಸಂಸದರ ಅಮಾನತನ್ನು ಕಾಂಗ್ರೆಸ್ ಖಂಡಿಸಿದೆ. ಸಂಸತ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್, ‘ಸಂಸದರನ್ನು ಅಮಾನತು ಮಾಡುವ ಮೂಲಕ ಜನರ ಪರವಾಗಿ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ ಪಕ್ಷವನ್ನು ಬೆದರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಇಂಥ ಬೆದರಿಕೆಗೆ ಬಗ್ಗುವುದಿಲ್ಲ’ ಎಂದು ಹೇಳಿದರು.