ಬೊಗಳಿದ್ದಕ್ಕೆ ಗರ್ಭಿಣಿ ನಾಯಿಯನ್ನು ಥಳಿಸಿ ಕೊಂದ 4 ಮಂದಿಯ ಬಂಧನ

ನವದೆಹಲಿ: ಬೊಗಳಿತು ಎನ್ನುವ ಕಾರಣಕ್ಕೆ ಗರ್ಭಿಣಿ ಶ್ವಾನವನ್ನು ಅಮಾನವೀಯವಾಗಿ ಥಳಿಸಿ ಕೊಂದ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ನಿವಾಸಿ ಅವಿನಾಶ್ ಮಿಂಜ್ (24), ಉತ್ತರಾಖಂಡ್ನ ಅನಿಶ್ ಹೊರ್ಹೋರಿಯಾ (18) ಜಾರ್ಖಂಡ್ನ ರಾಹುಲ್ ಕುಜುರ್ (19) ಹಾಗೂ ಉತ್ತರ ಪ್ರದೇಶದ ಗುರುವಚನ್ (19) ಬಂಧಿತರು.
ಗುಂಪೊಂದು ಗರ್ಭಿಣಿ ಶ್ವಾನವನ್ನು ಥಳಿಸುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಕ್ರೌರ್ಯಕ್ಕೆ ಭಾರೀ ಖಂಡನೆಯೂ ವ್ಯಕ್ತವಾಗಿತ್ತು.
ಬೇಸ್ಬಾಲ್ ಬ್ಯಾಟ್, ಕೋಲು ಹಾಗೂ ಕಬ್ಬಿಣದ ರಾಡ್ಗಳಿಂದ ಶ್ವಾನವನ್ನು ಥಳಿಸಿ, ಗಹಗಹಿಸಿ ನಗುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.
ಅಲ್ಲದೇ ಶ್ವಾನದ ಕಾಲು ಹಿಡಿದು, ಮೈದಾನದ ತುಂಬಾ ಎಳೆದುಕೊಂಡು ಹೋಗುವ ದೃಶ್ಯಗಳೂ ವಿಡಿಯೊಲ್ಲಿ ದಾಖಲಾಗಿತ್ತು. ಈ ವೇಳೆಯಲ್ಲಿ ಶ್ವಾನ ಪ್ರಜ್ಞೆ ತಪ್ಪಿದಂತೆ ಕಂಡು ಬರುತ್ತಿತ್ತು.
ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದ್ದು, ಆಟವಾಡುವ ವೇಳೆ ನಾಯಿ ಬೊಗಳಿದ್ದಕ್ಕೆ ಥಳಿಸಿದೆವು ಎಂದು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.
ಬಂಧಿತ ನಾಲ್ಕು ಮಂದಿಯೂ ಓಖ್ಲಾದ, ಡಾನ್ ಬಾಸ್ಕೋ ತಾಂತ್ರಿಕ ಸಂಸ್ಥೆಯ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.