<p><strong>ಲಖನೌ</strong>: ಬಿಎಂಡಬ್ಲೂ ಕಾರ್ ಅನ್ನು ಗಂಟೆಗೆ 300 ಕಿಮೀ ವೇಗವಾಗಿ ಮುನ್ನುಗ್ಗಿಸುವಾಗ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇನಲ್ಲಿ ಸುಲ್ತಾನ್ಪುರ್ ಬಳಿ ನಡೆದಿರುವುದು ವರದಿಯಾಗಿದೆ.</p>.<p>ಮೃತರನ್ನು ಬಿಹಾರದ ಆನಂದ್ ಪ್ರಕಾಶ್, ಅಖಿಲೇಶ್ ಸಿಂಗ್, ದೀಪಕ್ ಕುಮಾರ್ ಹಾಗೂ ಮುಕೇಶ್ ಎಂದು ಗುರುತಿಸಲಾಗಿದೆ. ಎಲ್ಲರೂ 30 ವಯಸ್ಸಿನ ಆಸುಪಾಸಿನವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಿಎಂಡಬ್ಲೂ ಕಾರಿನಲ್ಲಿ ಕಳೆದ ಶುಕ್ರವಾರಪೂರ್ವಾಂಚಲ್ ಎಕ್ಸ್ಪ್ರೆಸ್ ವೇನಲ್ಲಿ ಸುಲ್ತಾನಪುರಕ್ಕೆಈ ಯುವಕರ ತಂಡ ತೆರಳುತ್ತಿತ್ತು. ಪಾನಮತ್ತರಾಗಿದ್ದ ಯುವಕರು ಚಾಲಕ ಆನಂದ್ ಪ್ರಕಾಶ್ನನ್ನು ವೇಗವಾಗಿ ಕಾರು ಚಲಾಯಿಸಲು ಪುಸಲಾಯಿಸಿದ್ದರು. ಈ ಘಟನೆ ಫೇಸ್ಬುಕ್ ಲೈವ್ ವಿಡಿಯೊದಲ್ಲಿ ದಾಖಲಾಗಿದ್ದು ಆ ವಿಡಿಯೊ ವೈರಲ್ ಆಗಿದೆ.</p>.<p>ಗಂಟೆಗೆ 300 ಕಿಮೀ ಕಾರು ಓಡಿಸುವ ಸಂದರ್ಭದಲ್ಲೇ ಯುವಕರು ಲೈವ್ ವಿಡಿಯೊ ಮಾಡಿದ್ದಾರೆ. ‘ಹೀಗೆ ಹೋದ್ರೆ ನಾವು ನಾಲ್ವರು ಸತ್ತೇ ಹೋಗುತ್ತೇವೆ’ ಎಂದು ಚಾಲಕ ಆನಂದ್ ಪ್ರಕಾಶ್ ಲೈವ್ನಲ್ಲಿ ಹೇಳುವುದು ದಾಖಲಾಗಿದ್ದು, ಅದರಂತೆ ಆಗಿ ಹೋಗಿದೆ.</p>.<p>ತೀವ್ರ ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಒಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.</p>.<p>‘ಅಪಘಾತದ ಭೀಕರತೆ ಎಷ್ಟಿತ್ತಂದರೆ ಬಿಎಂಡಬ್ಲೂ ಕಾರು ಸಂಪೂರ್ಣ ಪುಡಿ ಪುಡಿಯಾಗಿದ್ದು, ಯುವಕರ ದೇಹಗಳು ಸಂಪೂರ್ಣ ಛಿದ್ರ ಛಿದ್ರ ಆಗಿವೆ.ಕಂಟೈನರ್ ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ’ ಎಂದು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<p><a href="https://www.prajavani.net/india-news/bengaluru-techie-google-senior-manager-married-forcibly-in-bhopal-980937.html" itemprop="url">ಬಲವಂತದ ಮದುವೆಗೆ ಸಿಕ್ಕು ಫಜೀತಿ ಅನುಭವಿಸಿದ ಬೆಂಗಳೂರಿನ ಗೂಗಲ್ ಟೆಕ್ಕಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬಿಎಂಡಬ್ಲೂ ಕಾರ್ ಅನ್ನು ಗಂಟೆಗೆ 300 ಕಿಮೀ ವೇಗವಾಗಿ ಮುನ್ನುಗ್ಗಿಸುವಾಗ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇನಲ್ಲಿ ಸುಲ್ತಾನ್ಪುರ್ ಬಳಿ ನಡೆದಿರುವುದು ವರದಿಯಾಗಿದೆ.</p>.<p>ಮೃತರನ್ನು ಬಿಹಾರದ ಆನಂದ್ ಪ್ರಕಾಶ್, ಅಖಿಲೇಶ್ ಸಿಂಗ್, ದೀಪಕ್ ಕುಮಾರ್ ಹಾಗೂ ಮುಕೇಶ್ ಎಂದು ಗುರುತಿಸಲಾಗಿದೆ. ಎಲ್ಲರೂ 30 ವಯಸ್ಸಿನ ಆಸುಪಾಸಿನವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಿಎಂಡಬ್ಲೂ ಕಾರಿನಲ್ಲಿ ಕಳೆದ ಶುಕ್ರವಾರಪೂರ್ವಾಂಚಲ್ ಎಕ್ಸ್ಪ್ರೆಸ್ ವೇನಲ್ಲಿ ಸುಲ್ತಾನಪುರಕ್ಕೆಈ ಯುವಕರ ತಂಡ ತೆರಳುತ್ತಿತ್ತು. ಪಾನಮತ್ತರಾಗಿದ್ದ ಯುವಕರು ಚಾಲಕ ಆನಂದ್ ಪ್ರಕಾಶ್ನನ್ನು ವೇಗವಾಗಿ ಕಾರು ಚಲಾಯಿಸಲು ಪುಸಲಾಯಿಸಿದ್ದರು. ಈ ಘಟನೆ ಫೇಸ್ಬುಕ್ ಲೈವ್ ವಿಡಿಯೊದಲ್ಲಿ ದಾಖಲಾಗಿದ್ದು ಆ ವಿಡಿಯೊ ವೈರಲ್ ಆಗಿದೆ.</p>.<p>ಗಂಟೆಗೆ 300 ಕಿಮೀ ಕಾರು ಓಡಿಸುವ ಸಂದರ್ಭದಲ್ಲೇ ಯುವಕರು ಲೈವ್ ವಿಡಿಯೊ ಮಾಡಿದ್ದಾರೆ. ‘ಹೀಗೆ ಹೋದ್ರೆ ನಾವು ನಾಲ್ವರು ಸತ್ತೇ ಹೋಗುತ್ತೇವೆ’ ಎಂದು ಚಾಲಕ ಆನಂದ್ ಪ್ರಕಾಶ್ ಲೈವ್ನಲ್ಲಿ ಹೇಳುವುದು ದಾಖಲಾಗಿದ್ದು, ಅದರಂತೆ ಆಗಿ ಹೋಗಿದೆ.</p>.<p>ತೀವ್ರ ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಒಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.</p>.<p>‘ಅಪಘಾತದ ಭೀಕರತೆ ಎಷ್ಟಿತ್ತಂದರೆ ಬಿಎಂಡಬ್ಲೂ ಕಾರು ಸಂಪೂರ್ಣ ಪುಡಿ ಪುಡಿಯಾಗಿದ್ದು, ಯುವಕರ ದೇಹಗಳು ಸಂಪೂರ್ಣ ಛಿದ್ರ ಛಿದ್ರ ಆಗಿವೆ.ಕಂಟೈನರ್ ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ’ ಎಂದು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<p><a href="https://www.prajavani.net/india-news/bengaluru-techie-google-senior-manager-married-forcibly-in-bhopal-980937.html" itemprop="url">ಬಲವಂತದ ಮದುವೆಗೆ ಸಿಕ್ಕು ಫಜೀತಿ ಅನುಭವಿಸಿದ ಬೆಂಗಳೂರಿನ ಗೂಗಲ್ ಟೆಕ್ಕಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>