ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ: ಹೈಟೆನ್ಷನ್‌ ತಂತಿ ಟ್ರ್ಯಾಕ್ಟರ್‌ ಮೇಲೆ ಬಿದ್ದು 4 ಕೃಷಿ ಕಾರ್ಮಿಕರ ಸಾವು

Last Updated 2 ನವೆಂಬರ್ 2022, 19:46 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ದರ್ಗಾ ಹೊನ್ನೂರು ಗ್ರಾಮದಲ್ಲಿ ಬುಧವಾರ ಟ್ರ್ಯಾಕ್ಟರ್‌ವೊಂದರ ಮೇಲೆ ಹೈಟೆನ್ಷನ್‌ ತಂತಿ ಬಿದ್ದು, ವಿದ್ಯುತ್‌ ಪ್ರವಹಿಸಿದ ಪರಿಣಾಮ ನಾಲ್ವರು ಕೃಷಿ ಕಾರ್ಮಿಕರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕರ್ನಾಟಕದ ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅನಂತಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಫಕೀರಪ್ಪ ತಿಳಿಸಿದ್ದಾರೆ.

ದಿನದ ಕೆಲಸ ಮುಗಿದ ನಂತರ ಕೃಷಿ ಕಾರ್ಮಿಕರು ಟ್ರ್ಯಾಕ್ಟರ್‌ ಹತ್ತುತ್ತಿದ್ದರು. ಈ ವೇಳೆ, ವಿದ್ಯುತ್‌ ತಂತಿ ತುಂಡಾಗಿ, ಟ್ರ್ಯಾಕ್ಟರ್‌ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಹಾರ: ‘ಘಟನೆ ಬಗ್ಗೆ ಮುಖ್ಯಮಂತ್ರಿ ವೈ.ಎಸ್‌.ಜಗನಮೋಹನ್‌ ರೆಡ್ಡಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರ ಘೋಷಿಸಿದ್ದಾರೆ’ ಎಂದು ರಾಯದುರ್ಗ ಶಾಸಕ ಕಾಪು ರಾಮಚಂದ್ರ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT