‘ಅಮೃತಸರದ ಘರಿಂದಾ ಪ್ರದೇಶದ ನಿವಾಸಿ ನಿರ್ಮಲ್ ಸಿಂಗ್ ಎನ್ನುವವರು ಪಾಕಿಸ್ತಾನದಿಂದ ಕಳುಹಿಸಲಾಗಿರುವ ಹೆರಾಯಿನ್ ಅನ್ನು ಅಂತರರಾಷ್ಟ್ರೀಯ ಗಡಿಯಿಂದ ಭಾರತದೊಳಗೆ ತೆಗೆದುಕೊಂಡು ಬರಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಆಧಾರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು’ ಎಂದು ಅಮೃತಸರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಕುರಾನಾ ತಿಳಿಸಿದ್ದಾರೆ.