<p><strong>ನವದೆಹಲಿ:</strong> 2018ರಿಂದ 2020ರ ಅವಧಿಯಲ್ಲಿ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಶುಕ್ರವಾರ ತಿಳಿಸಿದೆ.</p>.<p>ಇದೇ ಅವಧಿಯಲ್ಲಿ ದೇಶದಲ್ಲಿ 22.54 ಲಕ್ಷ ಜನರು ಈ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸದನಕ್ಕೆ ತಿಳಿಸಿದರು.</p>.<p>2020ರಲ್ಲಿ 13,92,179, 2019ರಲ್ಲಿ 13,58,415 ಹಾಗೂ 2018ರಲ್ಲಿ 13,25,232 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಆಯುಷ್ಮಾನ್ ಭಾರತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕೇಂದ್ರಗಳಲ್ಲಿ ಕ್ಯಾನ್ಸರ್ ಪತ್ತೆ ಸೇವೆ ಲಭ್ಯ ಇದೆ. ಆಯುಷ್ಮಾನ್ ಭಾರತ್–ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕ್ಯಾನ್ಸರ್ಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>ಕ್ಯಾನ್ಸರ್ ಸೇರಿದಂತೆ ಜೀವಕ್ಕೆ ಎರವಾಗುವ ಕಾಯಿಲೆಗಳಿಂದ ಬಳಲುವವರು ಬಿಪಿಎಲ್ ಕುಟುಂಬಕ್ಕೆ ಸೇರಿದವರಾಗಿದ್ದರೆ, ಅವರಿಗೆ ರಾಷ್ಟ್ರೀಯ ಆರೋಗ್ಯ ನಿಧಿ ಹಾಗೂ ಆರೋಗ್ಯ ಸಚಿವರ ವಿವೇಚನಾ ನಿಧಿಯಿಂದ (ಎಚ್ಎಂಡಿಜಿ) ಹಣಕಾಸು ನೆರವು ನೀಡಲಾಗುತ್ತದೆ ಎಂದೂ ಸಚಿವ ಮಾಂಡವಿಯಾ ತಿಳಿಸಿದರು.</p>.<p>ಎಚ್ಎಂಡಿಜಿಯಡಿ ಸದ್ಯ ₹ 20 ಲಕ್ಷ ಇದೆ. ಆದರೆ, ಈ ವರೆಗೆ ಯಾರೂ ನೆರವು ಕೋರಿ ಅರ್ಜಿ ಸಲ್ಲಿಸದ ಕಾರಣ, ಈ ಹಣ ಬಳಕೆಯಾಗಿಯೇ ಇಲ್ಲ ಎಂದರು.</p>.<p>ಎಚ್ಎಂಡಿಜಿಯಡಿ ಗರಿಷ್ಠ ₹ 1.25 ಲಕ್ಷ ನೆರವು ನೀಡಲು ಅವಕಾಶ ಇದೆ. ರಾಷ್ಟ್ರೀಯ ಆರೋಗ್ಯ ನಿಧಿಯಡಿ ಗರಿಷ್ಠ ₹ 15 ಲಕ್ಷದ ವರೆಗೆ ನೀಡಬಹುದಾಗಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2018ರಿಂದ 2020ರ ಅವಧಿಯಲ್ಲಿ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಶುಕ್ರವಾರ ತಿಳಿಸಿದೆ.</p>.<p>ಇದೇ ಅವಧಿಯಲ್ಲಿ ದೇಶದಲ್ಲಿ 22.54 ಲಕ್ಷ ಜನರು ಈ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸದನಕ್ಕೆ ತಿಳಿಸಿದರು.</p>.<p>2020ರಲ್ಲಿ 13,92,179, 2019ರಲ್ಲಿ 13,58,415 ಹಾಗೂ 2018ರಲ್ಲಿ 13,25,232 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಆಯುಷ್ಮಾನ್ ಭಾರತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕೇಂದ್ರಗಳಲ್ಲಿ ಕ್ಯಾನ್ಸರ್ ಪತ್ತೆ ಸೇವೆ ಲಭ್ಯ ಇದೆ. ಆಯುಷ್ಮಾನ್ ಭಾರತ್–ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕ್ಯಾನ್ಸರ್ಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.</p>.<p>ಕ್ಯಾನ್ಸರ್ ಸೇರಿದಂತೆ ಜೀವಕ್ಕೆ ಎರವಾಗುವ ಕಾಯಿಲೆಗಳಿಂದ ಬಳಲುವವರು ಬಿಪಿಎಲ್ ಕುಟುಂಬಕ್ಕೆ ಸೇರಿದವರಾಗಿದ್ದರೆ, ಅವರಿಗೆ ರಾಷ್ಟ್ರೀಯ ಆರೋಗ್ಯ ನಿಧಿ ಹಾಗೂ ಆರೋಗ್ಯ ಸಚಿವರ ವಿವೇಚನಾ ನಿಧಿಯಿಂದ (ಎಚ್ಎಂಡಿಜಿ) ಹಣಕಾಸು ನೆರವು ನೀಡಲಾಗುತ್ತದೆ ಎಂದೂ ಸಚಿವ ಮಾಂಡವಿಯಾ ತಿಳಿಸಿದರು.</p>.<p>ಎಚ್ಎಂಡಿಜಿಯಡಿ ಸದ್ಯ ₹ 20 ಲಕ್ಷ ಇದೆ. ಆದರೆ, ಈ ವರೆಗೆ ಯಾರೂ ನೆರವು ಕೋರಿ ಅರ್ಜಿ ಸಲ್ಲಿಸದ ಕಾರಣ, ಈ ಹಣ ಬಳಕೆಯಾಗಿಯೇ ಇಲ್ಲ ಎಂದರು.</p>.<p>ಎಚ್ಎಂಡಿಜಿಯಡಿ ಗರಿಷ್ಠ ₹ 1.25 ಲಕ್ಷ ನೆರವು ನೀಡಲು ಅವಕಾಶ ಇದೆ. ರಾಷ್ಟ್ರೀಯ ಆರೋಗ್ಯ ನಿಧಿಯಡಿ ಗರಿಷ್ಠ ₹ 15 ಲಕ್ಷದ ವರೆಗೆ ನೀಡಬಹುದಾಗಿದೆ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>