ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಅರಣ್ಯ ಸಚಿವ ಪರಿಮಳ್ ಸುಕ್ಲಬೈದ್ಯ, ‘ಪ್ರಾಣಿಗಳಿಗೆ ಅಗತ್ಯವಿರುವ ಹುಲ್ಲು, ನೆಲ್ಲಿಕಾಯಿ ಸೇರಿದಂತೆ ವಿವಿಧ ರೀತಿಯ ಹಣ್ಣಿ ಮರಗಳು ಇರುವಂತೆ ದಿಬ್ಬಗಳನ್ನು ವಿನ್ಯಾಸಗೊಳಿಸಲಾಗಿದೆ. ಇದರಿಂದ ಪ್ರವಾಹ ಸಂದರ್ಭದಲ್ಲಿ ಪ್ರಾಣಿಗಳು ಸಾವನ್ನಪ್ಪುವುದನ್ನು ತಡೆಗಟ್ಟಬಹುದು. ಅಷ್ಟೇ ಅಲ್ಲದೆ, ಕಾಜಿರಂಗ ರಾಷ್ಟ್ರೀಯ ವನ್ಯದಾಮದಲ್ಲಿ ಪ್ರಾಣಿಗಳ ರಕ್ಷಣೆಗೆಂದೇ 25 ಬೋಟ್ ವ್ಯವಸ್ಥೆ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.