<p class="title"><strong>ತಿರುವನಂತಪುರಂ:</strong> ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ಕನಿಷ್ಠ 41 ಮಂದಿ ಮಲಯಾಳಿಗರು ತಾಲಿಬಾನ್ ನಿಯಂತ್ರಣದಲ್ಲಿರುವ ಕಾಬೂಲ್ನಲ್ಲಿ ಸಿಲುಕಿದ್ದಾರೆ ಎಂದು ಕೇರಳ ಸರ್ಕಾರ ಮಂಗಳವಾರ ತಿಳಿಸಿದೆ.</p>.<p class="title">ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದೂ ಮನವಿ ಮಾಡಿದೆ. ಅನಿವಾಸಿ ಕೇರಳಿಗರ ಕಲ್ಯಾಣಕ್ಕೆ ಕೆಲಸ ಮಾಡುವ ಸರ್ಕಾರದ ಇಲಾಖೆ ‘ನೋಕ್ರಾ’ಗೆ ಬಂದಿರುವ ಆತಂಕಭರಿತ ದೂರವಾಣಿ ಕರೆಗಳ ಹಿನ್ನೆಲೆಯಲ್ಲಿ ಸರ್ಕಾರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯಲಾಗಿದೆ.</p>.<p class="title">ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೆ.ಎಳಂಗೋವನ್, ನೋಕ್ರಾ ಸಿಇಒ ಹರಿಕೃಷ್ಣನ್ ನಂಬೂಥಿರಿ ಅವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪ್ರತ್ಯೇಕ ಪತ್ರ ಬರೆದಿದ್ದಾರೆ.</p>.<p class="title">ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದವರು, ಮಹಿಳೆಯರು, ಮಕ್ಕಳು ಒಳಗೊಂಡು ಸುಮಾರು 41 ಮಂದಿ ಕಾಬೂಲ್ನಲ್ಲಿ ಸಿಲುಕಿದ್ದಾರೆ. ಅಲ್ಲಿ ಅತಂತ್ರರಾಗಿರುವ ಭಾರತೀಯರನ್ನು ಗುರುತಿಸಿ ತಾಲಿಬಾನಿಗಳು ಪಾಸ್ಪೋರ್ಟ್ ಮತ್ತು ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದೂ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರಂ:</strong> ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ಕನಿಷ್ಠ 41 ಮಂದಿ ಮಲಯಾಳಿಗರು ತಾಲಿಬಾನ್ ನಿಯಂತ್ರಣದಲ್ಲಿರುವ ಕಾಬೂಲ್ನಲ್ಲಿ ಸಿಲುಕಿದ್ದಾರೆ ಎಂದು ಕೇರಳ ಸರ್ಕಾರ ಮಂಗಳವಾರ ತಿಳಿಸಿದೆ.</p>.<p class="title">ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದೂ ಮನವಿ ಮಾಡಿದೆ. ಅನಿವಾಸಿ ಕೇರಳಿಗರ ಕಲ್ಯಾಣಕ್ಕೆ ಕೆಲಸ ಮಾಡುವ ಸರ್ಕಾರದ ಇಲಾಖೆ ‘ನೋಕ್ರಾ’ಗೆ ಬಂದಿರುವ ಆತಂಕಭರಿತ ದೂರವಾಣಿ ಕರೆಗಳ ಹಿನ್ನೆಲೆಯಲ್ಲಿ ಸರ್ಕಾರ, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯಲಾಗಿದೆ.</p>.<p class="title">ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕೆ.ಎಳಂಗೋವನ್, ನೋಕ್ರಾ ಸಿಇಒ ಹರಿಕೃಷ್ಣನ್ ನಂಬೂಥಿರಿ ಅವರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪ್ರತ್ಯೇಕ ಪತ್ರ ಬರೆದಿದ್ದಾರೆ.</p>.<p class="title">ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದವರು, ಮಹಿಳೆಯರು, ಮಕ್ಕಳು ಒಳಗೊಂಡು ಸುಮಾರು 41 ಮಂದಿ ಕಾಬೂಲ್ನಲ್ಲಿ ಸಿಲುಕಿದ್ದಾರೆ. ಅಲ್ಲಿ ಅತಂತ್ರರಾಗಿರುವ ಭಾರತೀಯರನ್ನು ಗುರುತಿಸಿ ತಾಲಿಬಾನಿಗಳು ಪಾಸ್ಪೋರ್ಟ್ ಮತ್ತು ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದೂ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>