ಸುಪ್ರೀಂಕೋರ್ಟ್ನಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯದ 75 ವರ್ಷಗಳ ನಂತರವೂಅಪರಾಧ ಹಿನ್ನೆಲೆ ಹೊಂದಿದ ಶೇಕಡ 43ರಷ್ಟು ಜನಪ್ರತಿನಿಧಿಗಳು ಚುನಾಯಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಬೇಕಾದ ಅಗತ್ಯವಿದೆ ಎಂದು ಭಾವಿಸುತ್ತೇನೆ. ಆದರೆ ಯಾವ ರಾಜಕೀಯ ಪಕ್ಷಗಳ ನೇತಾರರೂ ಈ ಕೆಲಸಕ್ಕೆಮುಂದಾಗುವುದಿಲ್ಲ. ನಾವೇ ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಹೇಳಿದರು.