‘ಘಟನೆ ಸಂಬಂಧ ಶಕೀಲ್, ನಾಸೀರ್ ಮತ್ತು ಬಬ್ಲು ಎಂಬುವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ಐಪಿಸಿ ಸೆಕ್ಷನ್ 302ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇತರರಿಗಾಗಿ ಶೋಧ ನಡೆಸುತ್ತಿದ್ದೇವೆ’ ಎಂದು ಸೂರ್ಸಾಗರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಗೌತಮ್ ದೊತಾಸರಾ ಹೇಳಿದ್ದಾರೆ.