<p><strong>ನವದೆಹಲಿ:</strong> ಆಗಸ್ಟ್ 15ರ ನಂತರ ಜಮ್ಮು ಮತ್ತು ಕಾಶ್ಮೀರದ ನಿಗದಿತ ಪ್ರದೇಶಗಳಲ್ಲಿ ಇಂಟರ್ನೆಟ್ ನಿರ್ಬಂಧ ತೆರವುಗೊಳಿಸಿ 4ಜಿ ಮರುಸ್ಥಾಪನೆ ನೀಡುವ ಬಗ್ಗೆ ವಿಶೇಷ ಸಮಿತಿ ಚಿಂತನೆ ನಡೆಸಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಹೇಳಿದೆ.</p>.<p>ಪ್ರಾಯೋಗಿಕ ಆಧಾರದ ಮೇಲೆ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಕೇಂದ್ರ ಹೇಳಿದೆ.</p>.<p>ಕೇಂದ್ರದ ಪರವಾಗಿ ಸುಪ್ರೀಂಕೋರ್ಟ್ಗೆಹಾಜರಾದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಜಮ್ಮು ಕಾಶ್ಮೀರ ವಿಭಾಗದಲ್ಲಿ ಒಂದೊಂದು ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಇಂಟರ್ನೆಟ್ ಮರುಸ್ಥಾಪನೆ ಮಾಡಲು ಸಮಿತಿ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಸೌಲಭ್ಯವನ್ನು ನಿಶ್ಚಿತ ವಿಧಾನ ಮತ್ತು ಪ್ರಾಯೋಗಿಕ ರೀತಿಯಲ್ಲಿ ನೀಡಿಎರಡು ತಿಂಗಳ ಬಳಿಕ ಸಮಿತಿ ಅದನ್ನು ಪರಿಶೀಲಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕೇಂದ್ರ ಮತ್ತು ಜಮ್ಮು ಕಾಶ್ಮೀರ ಆಡಳಿತ ವ್ಯವಸ್ಥೆ ಕಡೆಯಿಂದ ಇದು ಉತ್ತಮ ನಡೆಎಂದು ನ್ಯಾಯಮೂರ್ತಿ ಆರ್.ಸುಭಾಶ್ ರೆಡ್ಡಿ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠ ಹೇಳಿದೆ.</p>.<p>ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದ ನಂತರ ಅಲ್ಲಿ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕ ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಗಸ್ಟ್ 15ರ ನಂತರ ಜಮ್ಮು ಮತ್ತು ಕಾಶ್ಮೀರದ ನಿಗದಿತ ಪ್ರದೇಶಗಳಲ್ಲಿ ಇಂಟರ್ನೆಟ್ ನಿರ್ಬಂಧ ತೆರವುಗೊಳಿಸಿ 4ಜಿ ಮರುಸ್ಥಾಪನೆ ನೀಡುವ ಬಗ್ಗೆ ವಿಶೇಷ ಸಮಿತಿ ಚಿಂತನೆ ನಡೆಸಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಹೇಳಿದೆ.</p>.<p>ಪ್ರಾಯೋಗಿಕ ಆಧಾರದ ಮೇಲೆ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಕೇಂದ್ರ ಹೇಳಿದೆ.</p>.<p>ಕೇಂದ್ರದ ಪರವಾಗಿ ಸುಪ್ರೀಂಕೋರ್ಟ್ಗೆಹಾಜರಾದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಜಮ್ಮು ಕಾಶ್ಮೀರ ವಿಭಾಗದಲ್ಲಿ ಒಂದೊಂದು ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಇಂಟರ್ನೆಟ್ ಮರುಸ್ಥಾಪನೆ ಮಾಡಲು ಸಮಿತಿ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.<br /><br />ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಸೌಲಭ್ಯವನ್ನು ನಿಶ್ಚಿತ ವಿಧಾನ ಮತ್ತು ಪ್ರಾಯೋಗಿಕ ರೀತಿಯಲ್ಲಿ ನೀಡಿಎರಡು ತಿಂಗಳ ಬಳಿಕ ಸಮಿತಿ ಅದನ್ನು ಪರಿಶೀಲಿಸಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕೇಂದ್ರ ಮತ್ತು ಜಮ್ಮು ಕಾಶ್ಮೀರ ಆಡಳಿತ ವ್ಯವಸ್ಥೆ ಕಡೆಯಿಂದ ಇದು ಉತ್ತಮ ನಡೆಎಂದು ನ್ಯಾಯಮೂರ್ತಿ ಆರ್.ಸುಭಾಶ್ ರೆಡ್ಡಿ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠ ಹೇಳಿದೆ.</p>.<p>ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದ ನಂತರ ಅಲ್ಲಿ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕ ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>