ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡು ಹಾರಿಸಿ ನಾಲ್ವರು ಸಹೋದ್ಯೋಗಿಗಳನ್ನು ಕೊಂದು, ತಾನು ಹತನಾದ ಬಿಎಸ್‌ಎಫ್‌ ಯೋಧ

Last Updated 6 ಮಾರ್ಚ್ 2022, 13:42 IST
ಅಕ್ಷರ ಗಾತ್ರ

ಅಮೃತಸರ: ಪಂಜಾಬ್‌ನ ಅಮೃತಸರದ ಖಾಸಾ ಎಂಬಲ್ಲಿರುವ ಸೇನಾ ಶಿಬಿರದಲ್ಲಿ ಭಾನುವಾರ ದುರ್ಘಟನೆ ಸಂಭವಿಸಿದ್ದು, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಐವರು ಯೋಧರು ಮೃತಪಟ್ಟಿದ್ದಾರೆ.

ಬಿಎಸ್‌ಎಫ್‌ ಪೇದೆ ಸಾತೆಪ್ಪ ಎಸ್‌.ಕೆ ಎಂಬುವವರು ಐವರು ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಈ ಪೈಕಿ ನಾಲ್ವರು ಹತರಾದರೆ, ಘಟನೆಯಲ್ಲಿ ಗಾಯಗೊಂಡಿದ್ದ ಸಾತೆಪ್ಪಅವರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ‘ಐಎಎನ್‌ಎಸ್‌’ ವರದಿ ಮಾಡಿದೆ.

ಸಾತೆಪ್ಪ ಎಸ್‌.ಕೆ ಕರ್ನಾಟಕದವರಾಗಿದ್ದಾರೆ.

ಅಟ್ಟಾರಿ ವಾಘಾ ಗಡಿಯಿಂದ 20 ಕಿ.ಮೀ ದೂರದಲ್ಲಿರುವ ಅಮೃತಸರದ ಖಾಸಾ ಎಂಬಲ್ಲಿನ ಸೇನಾ ಶಿಬಿರ ‘144 ಬಿಎನ್‌’ನಲ್ಲಿ ಈ ಅವಘಡ ನಡೆದಿದೆ.

ಘಟನೆ ಬಗ್ಗೆ ಸೇನೆಯು ತನಿಖೆಗೆ ಆದೇಶಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT