<p><strong>ನವಾದಾ, ಬಿಹಾರ:</strong> ಬಿಹಾರದ ನವಾದಾ ಜಿಲ್ಲೆಯ ಗ್ರಾಮವೊಂದರ ಮುಖಂಡರು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಎಲ್ಲರ ಮುಂದೆ ಐದು ಬಸ್ಕಿ ಹೊಡೆಸುವ ಶಿಕ್ಷೆ ನೀಡಿದ್ದಾರೆ.</p>.<p>ಯುವಕ ಬಸ್ಕಿ ಹೊಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಗುವಿನ ಮೇಲಿನ ಅತ್ಯಾಚಾರದ ಕೃತ್ಯವನ್ನು ಹಗುರವಾಗಿ ತೆಗೆದುಕೊಂಡಿರುವ ಬಗ್ಗೆ ಎಲ್ಲೆಡೆ ಛೀಮಾರಿ ವ್ಯಕ್ತವಾಗಿದೆ.</p>.<p>ಆರೋಪಿ ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ, ತನ್ನ ಕೋಳಿ ಫಾರ್ಮ್ನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಆರೋಪಿಯನ್ನು ಹಿಡಿದು ಗ್ರಾಮದ ಮುಖಂಡರ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ, ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಕ್ಕೆ ಶಿಕ್ಷೆಯ ರೂಪದಲ್ಲಿ ಐದು ಬಸ್ಕಿಯನ್ನು ಹೊಡೆಸಲಾಗಿದೆ ಎಂದು ವರದಿಯಾಗಿದೆ.</p>.<p>ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ನೆಟ್ಟಿಗರು, ಅಪರಾಧಿಗಳು ಹೀಗೆ ಬಚಾವಾಗಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತದೆಯೇ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಎಸ್ಪಿ ಗೌರವ್ ಮಂಗ್ಲ, ಎಫ್ಐಆರ್ ದಾಖಲಿಸಿರುವುದಾಗಿ ತಿಳಿಸಿದರು. ಆರೋಪಿಯ ವಿರುದ್ಧ ಹಾಗೂ ಅಪರಾಧವನ್ನು ಮರೆಮಾಚಲು ಪ್ರಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಾದಾ, ಬಿಹಾರ:</strong> ಬಿಹಾರದ ನವಾದಾ ಜಿಲ್ಲೆಯ ಗ್ರಾಮವೊಂದರ ಮುಖಂಡರು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಎಲ್ಲರ ಮುಂದೆ ಐದು ಬಸ್ಕಿ ಹೊಡೆಸುವ ಶಿಕ್ಷೆ ನೀಡಿದ್ದಾರೆ.</p>.<p>ಯುವಕ ಬಸ್ಕಿ ಹೊಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಗುವಿನ ಮೇಲಿನ ಅತ್ಯಾಚಾರದ ಕೃತ್ಯವನ್ನು ಹಗುರವಾಗಿ ತೆಗೆದುಕೊಂಡಿರುವ ಬಗ್ಗೆ ಎಲ್ಲೆಡೆ ಛೀಮಾರಿ ವ್ಯಕ್ತವಾಗಿದೆ.</p>.<p>ಆರೋಪಿ ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ, ತನ್ನ ಕೋಳಿ ಫಾರ್ಮ್ನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಆರೋಪಿಯನ್ನು ಹಿಡಿದು ಗ್ರಾಮದ ಮುಖಂಡರ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ, ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಕ್ಕೆ ಶಿಕ್ಷೆಯ ರೂಪದಲ್ಲಿ ಐದು ಬಸ್ಕಿಯನ್ನು ಹೊಡೆಸಲಾಗಿದೆ ಎಂದು ವರದಿಯಾಗಿದೆ.</p>.<p>ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ನೆಟ್ಟಿಗರು, ಅಪರಾಧಿಗಳು ಹೀಗೆ ಬಚಾವಾಗಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತದೆಯೇ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಎಸ್ಪಿ ಗೌರವ್ ಮಂಗ್ಲ, ಎಫ್ಐಆರ್ ದಾಖಲಿಸಿರುವುದಾಗಿ ತಿಳಿಸಿದರು. ಆರೋಪಿಯ ವಿರುದ್ಧ ಹಾಗೂ ಅಪರಾಧವನ್ನು ಮರೆಮಾಚಲು ಪ್ರಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>