<p><strong>ಗುವಾಹಟಿ</strong>: ಅಸ್ಸಾಂನಲ್ಲಿ ಬುಧವಾರ ಬೆಳಿಗ್ಗೆ 5.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಬಾಂಗ್ಲಾದೇಶ ಸೇರಿದಂತೆ ನೆರೆ ರಾಜ್ಯಗಳಾದ ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.</p>.<p>‘ಅಸ್ಸಾಂನಲ್ಲಿ ಬೆಳಿಗ್ಗೆ 8.45ಕ್ಕೆ ಭೂಕಂಪ ಸಂಭವಿಸಿದ್ದು, ಗೋಲ್ಪಾರದಲ್ಲಿ 14 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಭೂಕಂಪ ಸಂಭವಿಸಿದ ಸ್ಥಳದಿಂದ 71 ಕಿ.ಮೀ ದೂರದಲ್ಲಿರುವ ಮೇಘಾಲಯದ ಉತ್ತರ ಭಾಗದ ತುರಾದಲ್ಲೂ ಭೂಮಿ ನಡುಗಿದ ಅನುಭವ ಆಗಿದೆ. ಗುವಾಹಟಿ ಮತ್ತು ಮೇಘಾಲಯದ ಜನರು ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ’ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (ಆರ್ಎಂಸಿ) ಉಪನಿರ್ದೇಶಕ ಸಂಜಯ್ ಒನೀಲ್ ಶಾ ಅವರು ಹೇಳಿದರು.</p>.<p>‘ಅಲಿಪುರ್ದುರ್ ಮತ್ತು ಜಲಪಾಯ್ಗುರಿ ಸೇರಿದಂತೆ ಪಶ್ಚಿಮ ಬಂಗಾಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಾಗೂ ಢಾಕಾ, ಗೈಬಂಧ, ಬೊಗುರಾ ಮತ್ತು ರಾಜ್ಶಾಹಿ ಸೇರಿದಂತೆ ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>‘ಭೂಕಂಪದಿಂದ ಯಾವುದೇ ಸಾವು–ನೋವು ವರದಿಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಅಸ್ಸಾಂನಲ್ಲಿ ಬುಧವಾರ ಬೆಳಿಗ್ಗೆ 5.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಬಾಂಗ್ಲಾದೇಶ ಸೇರಿದಂತೆ ನೆರೆ ರಾಜ್ಯಗಳಾದ ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.</p>.<p>‘ಅಸ್ಸಾಂನಲ್ಲಿ ಬೆಳಿಗ್ಗೆ 8.45ಕ್ಕೆ ಭೂಕಂಪ ಸಂಭವಿಸಿದ್ದು, ಗೋಲ್ಪಾರದಲ್ಲಿ 14 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಭೂಕಂಪ ಸಂಭವಿಸಿದ ಸ್ಥಳದಿಂದ 71 ಕಿ.ಮೀ ದೂರದಲ್ಲಿರುವ ಮೇಘಾಲಯದ ಉತ್ತರ ಭಾಗದ ತುರಾದಲ್ಲೂ ಭೂಮಿ ನಡುಗಿದ ಅನುಭವ ಆಗಿದೆ. ಗುವಾಹಟಿ ಮತ್ತು ಮೇಘಾಲಯದ ಜನರು ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ’ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (ಆರ್ಎಂಸಿ) ಉಪನಿರ್ದೇಶಕ ಸಂಜಯ್ ಒನೀಲ್ ಶಾ ಅವರು ಹೇಳಿದರು.</p>.<p>‘ಅಲಿಪುರ್ದುರ್ ಮತ್ತು ಜಲಪಾಯ್ಗುರಿ ಸೇರಿದಂತೆ ಪಶ್ಚಿಮ ಬಂಗಾಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಾಗೂ ಢಾಕಾ, ಗೈಬಂಧ, ಬೊಗುರಾ ಮತ್ತು ರಾಜ್ಶಾಹಿ ಸೇರಿದಂತೆ ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>‘ಭೂಕಂಪದಿಂದ ಯಾವುದೇ ಸಾವು–ನೋವು ವರದಿಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>