ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ‘ರೈತ ಮಹಾಪಂಚಾಯತ್‌‘ : ಬಿಗಿ ಭದ್ರತೆ

Last Updated 4 ಸೆಪ್ಟೆಂಬರ್ 2021, 7:11 IST
ಅಕ್ಷರ ಗಾತ್ರ

ಮುಜಫ್ಫರ್‌ನಗರ: ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳು ಸೇರಿದಂತೆ ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಭಾನುವಾರ(ಸೆ.5) ಇಲ್ಲಿ ಆಯೋಜಿಸಲಾಗಿರುವ ‘ರೈತರ ಮಹಾಪಂಚಾಯತ್‌‘ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.

ಭದ್ರತೆಗಾಗಿ ಆರು ಪ್ರಾಂತೀಯ ಸಶಸ್ತ್ರ ಪೊಲೀಸ್‌ ಪಡೆಗಳ (ಪಿಎಸಿ) ತಂಡಗಳು ಮತ್ತು ಎರಡು ಕ್ಷಿಪ್ರ ಕಾರ್ಯಪಡೆಯ (ಆರ್‌ಎಎಫ್‌) ತುಕಡಿಗಳನ್ನು ನಿಯೋಜಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಹಾರನ್‌ಪುರ ವಲಯದ ಡಿಐಜಿ ಪ್ರೀತಿಂದರ್ ಸಿಂಗ್, ‘ರೈತ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಐದು ಎಸ್‌ಎಸ್‌ಪಿ, ಏಳು ಎಎಸ್‌ಪಿ ಮತ್ತು 40 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಭದ್ರತೆಗೆ ನಿಯೋಜಿಸಲಾಗುವುದು. ಇಡೀ ಕಾರ್ಯಕ್ರಮವನ್ನು ವಿಡಿಯೊ ಚಿತ್ರೀಕರಣ ಮಾಡಿಸಲಾಗುವುದು‘ ಎಂದು ಹೇಳಿದ್ದಾರೆ.

ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ಯದುವೀರ್‌ ಸಿಂಗ್‌, ‘ಈ ರೈತ ಮಹಾಪಂಚಾಯತ್‌ನಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚಿಸಲಾಗುತ್ತದೆ. ಜೊತೆಗೆ, ಕಬ್ಬಿಗೆ ಬೆಂಬಲ ಬೆಲೆ ಮತ್ತು ವಿದ್ಯುತ್ ಪೂರೈಕೆಯಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ‘ ಎಂದು ಹೇಳಿದರು.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರು ಈ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT