ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ಯದುವೀರ್ ಸಿಂಗ್, ‘ಈ ರೈತ ಮಹಾಪಂಚಾಯತ್ನಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚಿಸಲಾಗುತ್ತದೆ. ಜೊತೆಗೆ, ಕಬ್ಬಿಗೆ ಬೆಂಬಲ ಬೆಲೆ ಮತ್ತು ವಿದ್ಯುತ್ ಪೂರೈಕೆಯಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ‘ ಎಂದು ಹೇಳಿದರು.