<p><strong>ಬಹ್ರೈಚ್, ಉತ್ತರಪ್ರದೇಶ (ಪಿಟಿಐ): </strong>ಬಹ್ರೈಚ್ ಜಿಲ್ಲೆಯನಾನ್ಪುರ ವ್ಯಾಪ್ತಿಯ ಮಸುಪುರ್ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಗಾಡಿಯಲ್ಲಿದ್ದ ಕಬ್ಬಿಣದ ಸರಳೊಂದು ಹೈಟೆನ್ಶನ್ ತಂತಿಗೆ ಸ್ಪರ್ಶಿಸಿದ್ದರಿಂದ ಐವರು ಮಕ್ಕಳ ಸಹಿತ ಆರು ಮಂದಿ ಮೃತಪಟ್ಟಿದ್ದಾರೆ.</p>.<p>‘ವೈರ್ ಸ್ಪರ್ಶಿಸುತ್ತಿದ್ದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿಸಿದ್ದಾಗ ಇನ್ನೂ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಸುಫೈನ್, ಇಲಿಯಾಸ್, ತಬ್ರೆಜ್, ಅಶ್ರಫ್ ಅಲಿ, ಅರಾಫತ್ ಮತ್ತು ಶಫೀಕ್ ಎಂದು ಗುರುತಿಸಲಾಗಿದೆ’ ಎಂದುಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅಶೋಕ್ ಕುಮಾರ್ ಮಾಹಿತಿ ನೀಡಿದರು.</p>.<p>‘ಈ ಅವಘಡಕ್ಕೆ ಯಾರೂ ಕಾರಣವಾಗಿಲ್ಲರುವುದರಿಂದ ಶವಗಳ ಮರಣೋತ್ತರ ಪರೀಕ್ಷೆ ಮಾಡಿಸುವುದು ಬೇಡವೆಂದುಸಾವಿಗೀಡಾದವರ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಚೌದರಿ ಹೇಳಿದರು.</p>.<p>ಇದೇ ವೇಳೆ, ವಿದ್ಯುತ್ ಸ್ಪರ್ಶದಿಂದ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹ್ರೈಚ್, ಉತ್ತರಪ್ರದೇಶ (ಪಿಟಿಐ): </strong>ಬಹ್ರೈಚ್ ಜಿಲ್ಲೆಯನಾನ್ಪುರ ವ್ಯಾಪ್ತಿಯ ಮಸುಪುರ್ ಗ್ರಾಮದಲ್ಲಿ ಭಾನುವಾರ ನಸುಕಿನಲ್ಲಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಗಾಡಿಯಲ್ಲಿದ್ದ ಕಬ್ಬಿಣದ ಸರಳೊಂದು ಹೈಟೆನ್ಶನ್ ತಂತಿಗೆ ಸ್ಪರ್ಶಿಸಿದ್ದರಿಂದ ಐವರು ಮಕ್ಕಳ ಸಹಿತ ಆರು ಮಂದಿ ಮೃತಪಟ್ಟಿದ್ದಾರೆ.</p>.<p>‘ವೈರ್ ಸ್ಪರ್ಶಿಸುತ್ತಿದ್ದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿಸಿದ್ದಾಗ ಇನ್ನೂ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಸುಫೈನ್, ಇಲಿಯಾಸ್, ತಬ್ರೆಜ್, ಅಶ್ರಫ್ ಅಲಿ, ಅರಾಫತ್ ಮತ್ತು ಶಫೀಕ್ ಎಂದು ಗುರುತಿಸಲಾಗಿದೆ’ ಎಂದುಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅಶೋಕ್ ಕುಮಾರ್ ಮಾಹಿತಿ ನೀಡಿದರು.</p>.<p>‘ಈ ಅವಘಡಕ್ಕೆ ಯಾರೂ ಕಾರಣವಾಗಿಲ್ಲರುವುದರಿಂದ ಶವಗಳ ಮರಣೋತ್ತರ ಪರೀಕ್ಷೆ ಮಾಡಿಸುವುದು ಬೇಡವೆಂದುಸಾವಿಗೀಡಾದವರ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಚೌದರಿ ಹೇಳಿದರು.</p>.<p>ಇದೇ ವೇಳೆ, ವಿದ್ಯುತ್ ಸ್ಪರ್ಶದಿಂದ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>