<p><strong>ಅಮರಾವತಿ:</strong> ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನುಜಿವಿಡು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಆರು ಕೃಷಿ ಕಾರ್ಮಿಕರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.</p>.<p>ಸಂತ್ರಸ್ತರು ವಿಜಯವಾಡದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ನುಜಿವಿಡು ಬಳಿಯ ಬುಡಕಟ್ಟು ಕುಗ್ರಾಮವಾದ ಲಿಯಾನ್ ತಾಂಡಾಗೆ ಸೇರಿದವರು ಮತ್ತು ಅವರು ಆಟೋರಿಕ್ಷಾದಲ್ಲಿ ಹತ್ತಿರದ ಹಳ್ಳಿಗೆ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಪಘಾತದಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದು, 8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ನುಜಿವಿಡು ಮತ್ತು ವಿಜಯವಾಡದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.</p>.<p>ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ ಎಂದು ನುಜಿವಿಡು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಶ್ರೀನಿವಾಸುಲು ತಿಳಿಸಿದ್ದಾರೆ.</p>.<p>ಆಂಧ್ರಪ್ರದೇಶದ ರಾಜ್ಯಪಾಲರಾದ ವಿಶ್ವಭೂಷಣ್ ಹರಿಚಂದನ್, ಉಪಮುಖ್ಯಮಂತ್ರಿ (ಆರೋಗ್ಯ) ಕೆ.ಕೆ. ಶ್ರೀನಿವಾಸ್, ಗೃಹ ಸಚಿವ ಎಂ ಸುಚರಿತ, ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಮತ್ತು ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸಂತಾಪ ಸೂಚಿಸಿದ್ದಾರೆ.</p>.<p>ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಉಪಮುಖ್ಯಮಂತ್ರಿ ಶ್ರೀನಿವಾಸ್ ಅವರು ಕೃಷ್ಣ ಜಿಲ್ಲಾ ವೈದ್ಯಕೀಯ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಮೃತರ ರಕ್ತಸಂಬಂಧಿಗಳಿಗೆ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ನುಜಿವಿಡು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಆರು ಕೃಷಿ ಕಾರ್ಮಿಕರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.</p>.<p>ಸಂತ್ರಸ್ತರು ವಿಜಯವಾಡದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ನುಜಿವಿಡು ಬಳಿಯ ಬುಡಕಟ್ಟು ಕುಗ್ರಾಮವಾದ ಲಿಯಾನ್ ತಾಂಡಾಗೆ ಸೇರಿದವರು ಮತ್ತು ಅವರು ಆಟೋರಿಕ್ಷಾದಲ್ಲಿ ಹತ್ತಿರದ ಹಳ್ಳಿಗೆ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಪಘಾತದಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದು, 8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ನುಜಿವಿಡು ಮತ್ತು ವಿಜಯವಾಡದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.</p>.<p>ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ ಎಂದು ನುಜಿವಿಡು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಶ್ರೀನಿವಾಸುಲು ತಿಳಿಸಿದ್ದಾರೆ.</p>.<p>ಆಂಧ್ರಪ್ರದೇಶದ ರಾಜ್ಯಪಾಲರಾದ ವಿಶ್ವಭೂಷಣ್ ಹರಿಚಂದನ್, ಉಪಮುಖ್ಯಮಂತ್ರಿ (ಆರೋಗ್ಯ) ಕೆ.ಕೆ. ಶ್ರೀನಿವಾಸ್, ಗೃಹ ಸಚಿವ ಎಂ ಸುಚರಿತ, ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಮತ್ತು ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸಂತಾಪ ಸೂಚಿಸಿದ್ದಾರೆ.</p>.<p>ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಉಪಮುಖ್ಯಮಂತ್ರಿ ಶ್ರೀನಿವಾಸ್ ಅವರು ಕೃಷ್ಣ ಜಿಲ್ಲಾ ವೈದ್ಯಕೀಯ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಮೃತರ ರಕ್ತಸಂಬಂಧಿಗಳಿಗೆ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>