<p><strong>ಶಿಮ್ಲಾ</strong>: ‘ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಮತ್ತೆ ಆರು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.</p>.<p>‘ಚೌರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಆರು ಶವಗಳು ಸಿಕ್ಕಿವೆ. ಇನ್ನುಳಿದ 9 ಮಂದಿಗಾಗಿ ಶೋಧ ಮುಂದುವರಿದಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಮಾಹಿತಿ ನೀಡಿದರು.</p>.<p>‘ಈ ಪ್ರದೇಶದಲ್ಲಿ ಭೂ ಕುಸಿತದ ಪರಿಣಾಮವಾಗಿ ಈಗಲೂ ಬಂಡೆಗಳು ಉರುಳುತ್ತಿವೆ. ಹಾಗಾಗಿ ಸಾರ್ವಜನಿಕರ ಸುರಕ್ಷತೆಗಾಗಿ ಈ ಪ್ರದೇಶದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 9ವರೆಗೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ನಿಚಾರ್ನ ಉಪ ವಿಭಾಗಾಧಿಕಾರಿ ಮನಮೋಹನ್ ಸಿಂಗ್ ಹೇಳಿದ್ಧಾರೆ.</p>.<p>ಈ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಸ್ವೊಂದರ ಮೇಲೆ ಬಂಡೆಗಳು ಬಿದ್ದು, ಇಬ್ಬರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ‘ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಮತ್ತೆ ಆರು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.</p>.<p>‘ಚೌರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಆರು ಶವಗಳು ಸಿಕ್ಕಿವೆ. ಇನ್ನುಳಿದ 9 ಮಂದಿಗಾಗಿ ಶೋಧ ಮುಂದುವರಿದಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಮಾಹಿತಿ ನೀಡಿದರು.</p>.<p>‘ಈ ಪ್ರದೇಶದಲ್ಲಿ ಭೂ ಕುಸಿತದ ಪರಿಣಾಮವಾಗಿ ಈಗಲೂ ಬಂಡೆಗಳು ಉರುಳುತ್ತಿವೆ. ಹಾಗಾಗಿ ಸಾರ್ವಜನಿಕರ ಸುರಕ್ಷತೆಗಾಗಿ ಈ ಪ್ರದೇಶದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 9ವರೆಗೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ನಿಚಾರ್ನ ಉಪ ವಿಭಾಗಾಧಿಕಾರಿ ಮನಮೋಹನ್ ಸಿಂಗ್ ಹೇಳಿದ್ಧಾರೆ.</p>.<p>ಈ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಸ್ವೊಂದರ ಮೇಲೆ ಬಂಡೆಗಳು ಬಿದ್ದು, ಇಬ್ಬರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>