<p><strong>ನವದೆಹಲಿ:</strong> 60ಕ್ಕೂ ಹೆಚ್ಚು ರೈತರು ಬಲಿಯಾದಾಗ ನರೇಂದ್ರ ಮೋದಿ ಸರ್ಕಾರ ಮುಜುಗರಕ್ಕೊಳಗಾಗಲಿಲ್ಲ. ಆದರೆ ಟ್ರ್ಯಾಕ್ಟರ್ ರ್ಯಾಲಿಯಿಂದ ಮುಜುಗರಕ್ಕೊಳಗಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಜನವರಿ 26 ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲು ರೈತ ಸಂಘಟನೆಗಳು ನಿರ್ಧರಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಡೆಸಲು ನಿರ್ಧರಿಸಿರುವ ರೈತರು, ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ಹೃದಯ ಭಾಗಗಳಲ್ಲಿ ಪ್ರತಿಭಟನೆಯನ್ನುನಡೆಸಲಿದ್ದಾರೆ.</p>.<p>ಆದರೆ ಗಣರಾಜ್ಯೋತ್ಸವಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ರೈತರು ನಡೆಸುವ ಪ್ರತಿಭಟನೆಯನ್ನು ನಿಷೇಧಿಸಿಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>ಕೇಂದ್ರ ಸರ್ಕಾರವು ತನ್ನ ಅರ್ಜಿಯಲ್ಲಿ, ಗಣರಾಜ್ಯೋತ್ಸವ ಮೆರವಣಿಗೆಗೆ ಅಡ್ಡಿಪಡಿಸುವುದು ದೇಶಕ್ಕೆ ಎದುರಾಗಲಿರುವ ಮುಜುಗರ ಎಂದು ಉಲ್ಲೇಖಿಸಿತ್ತು.</p>.<p>ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, '60ಕ್ಕೂ ಹೆಚ್ಚು ರೈತರು ಬಲಿಯಾದಾಗ ನರೇಂದ್ರ ಮೋದಿ ಸರ್ಕಾರವು ಮುಜುಗರಕ್ಕೊಳಗಾಗಿಲ್ಲ. ಆದರೆ ಟ್ರ್ಯಾಕ್ಟರ್ ರ್ಯಾಲಿ ಆಯೋಜನೆಯಿಂದ ಮುಜುಗರಕ್ಕೊಳಗಾಗುತ್ತಿದೆ' ಎಂದು ಆರೋಪಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmer-leaders-welcome-sc-verdict-staying-implementation-of-3-agri-laws-but-say-protest-to-continue-795745.html" itemprop="url">ಸುಪ್ರೀಂ ತೀರ್ಪು ಸ್ವಾಗತಾರ್ಹ, ಆದರೆ ಪ್ರತಿಭಟನೆ ಮುಂದುವರಿಯಲಿದೆ: ರೈತ ಮುಖಂಡರು </a></p>.<p>ಪ್ರತಿಭಟನಾ ನಿರತ ರೈತರ ಪ್ರಕಾರ, ನವೆಂಬರ್ 26ರಿಂದ ಆರಂಭವಾಗಿರುವ ಪ್ರತಿಭಟನೆಯಲ್ಲಿ ಇದುವರೆಗೆ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕೆಲವರು ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು ಕೆಲವರು ವಿಪರೀತ ಚಳಿಯನ್ನು ತಡೆಯಲಾರದೆ ಸಾವಿಗೆ ಶರಣಾಗಿದ್ದಾರೆ.</p>.<p>ವಿವಾದಿದ ಕೃಷಿ ಕಾಯ್ದೆ ಸಂಬಂಧ ಕೇಂದ್ರ ಸರ್ಕಾರ ಹಾಗೂ ರೈತರ ನಡುವಣ ಹಲವು ಸುತ್ತಿನ ಮಾತುಕತೆಗಳು ವಿಫಲಗೊಂಡಿದೆ. ಈ ಮಧ್ಯೆ ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ. ಅಲ್ಲದೆ ಬಿಕ್ಕಟ್ಟು ಬಗೆ ಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 60ಕ್ಕೂ ಹೆಚ್ಚು ರೈತರು ಬಲಿಯಾದಾಗ ನರೇಂದ್ರ ಮೋದಿ ಸರ್ಕಾರ ಮುಜುಗರಕ್ಕೊಳಗಾಗಲಿಲ್ಲ. ಆದರೆ ಟ್ರ್ಯಾಕ್ಟರ್ ರ್ಯಾಲಿಯಿಂದ ಮುಜುಗರಕ್ಕೊಳಗಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಜನವರಿ 26 ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲು ರೈತ ಸಂಘಟನೆಗಳು ನಿರ್ಧರಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲು ನಡೆಸಲು ನಿರ್ಧರಿಸಿರುವ ರೈತರು, ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ಹೃದಯ ಭಾಗಗಳಲ್ಲಿ ಪ್ರತಿಭಟನೆಯನ್ನುನಡೆಸಲಿದ್ದಾರೆ.</p>.<p>ಆದರೆ ಗಣರಾಜ್ಯೋತ್ಸವಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ರೈತರು ನಡೆಸುವ ಪ್ರತಿಭಟನೆಯನ್ನು ನಿಷೇಧಿಸಿಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>ಕೇಂದ್ರ ಸರ್ಕಾರವು ತನ್ನ ಅರ್ಜಿಯಲ್ಲಿ, ಗಣರಾಜ್ಯೋತ್ಸವ ಮೆರವಣಿಗೆಗೆ ಅಡ್ಡಿಪಡಿಸುವುದು ದೇಶಕ್ಕೆ ಎದುರಾಗಲಿರುವ ಮುಜುಗರ ಎಂದು ಉಲ್ಲೇಖಿಸಿತ್ತು.</p>.<p>ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, '60ಕ್ಕೂ ಹೆಚ್ಚು ರೈತರು ಬಲಿಯಾದಾಗ ನರೇಂದ್ರ ಮೋದಿ ಸರ್ಕಾರವು ಮುಜುಗರಕ್ಕೊಳಗಾಗಿಲ್ಲ. ಆದರೆ ಟ್ರ್ಯಾಕ್ಟರ್ ರ್ಯಾಲಿ ಆಯೋಜನೆಯಿಂದ ಮುಜುಗರಕ್ಕೊಳಗಾಗುತ್ತಿದೆ' ಎಂದು ಆರೋಪಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmer-leaders-welcome-sc-verdict-staying-implementation-of-3-agri-laws-but-say-protest-to-continue-795745.html" itemprop="url">ಸುಪ್ರೀಂ ತೀರ್ಪು ಸ್ವಾಗತಾರ್ಹ, ಆದರೆ ಪ್ರತಿಭಟನೆ ಮುಂದುವರಿಯಲಿದೆ: ರೈತ ಮುಖಂಡರು </a></p>.<p>ಪ್ರತಿಭಟನಾ ನಿರತ ರೈತರ ಪ್ರಕಾರ, ನವೆಂಬರ್ 26ರಿಂದ ಆರಂಭವಾಗಿರುವ ಪ್ರತಿಭಟನೆಯಲ್ಲಿ ಇದುವರೆಗೆ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕೆಲವರು ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು ಕೆಲವರು ವಿಪರೀತ ಚಳಿಯನ್ನು ತಡೆಯಲಾರದೆ ಸಾವಿಗೆ ಶರಣಾಗಿದ್ದಾರೆ.</p>.<p>ವಿವಾದಿದ ಕೃಷಿ ಕಾಯ್ದೆ ಸಂಬಂಧ ಕೇಂದ್ರ ಸರ್ಕಾರ ಹಾಗೂ ರೈತರ ನಡುವಣ ಹಲವು ಸುತ್ತಿನ ಮಾತುಕತೆಗಳು ವಿಫಲಗೊಂಡಿದೆ. ಈ ಮಧ್ಯೆ ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ. ಅಲ್ಲದೆ ಬಿಕ್ಕಟ್ಟು ಬಗೆ ಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>