ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: 60 ಕಾಶ್ಮೀರಿ ಯುವಕರು ನಾಪತ್ತೆ ಸುಳ್ಳೆಂದ ಪೊಲೀಸರು

Last Updated 1 ಸೆಪ್ಟೆಂಬರ್ 2021, 14:07 IST
ಅಕ್ಷರ ಗಾತ್ರ

ಶ್ರೀನಗರ: ಅಫ್ಗಾನಿಸ್ತಾನವನ್ನು ಆಗಸ್ಟ್ 15ರಂದು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಣಿವೆಯ ವಿವಿಧ ಭಾಗಗಳಿಂದ 60ಕ್ಕೂ ಹೆಚ್ಚು ಯುವಕರು ನಾಪತ್ತೆಯಾಗಿದ್ದಾರೆ ಎನ್ನುವ ಕೆಲವು ಮಾಧ್ಯಮ ವರದಿಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಅಲ್ಲಗಳೆದಿದ್ದಾರೆ.

‘ಅಫ್ಗಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಕಾಶ್ಮೀರ ಕಣಿವೆಯ ವಿವಿಧ ಭಾಗಗಳಿಂದ 60 ಯುವಕರು ನಾಪತ್ತೆಯಾಗಿದ್ದಾರೆ’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೆಸರನ್ನು ಉಲ್ಲೇಖಿಸಿ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಇದು ಸಂಪೂರ್ಣ ಸುಳ್ಳು ಸುದ್ದಿ’ ಎಂದು ಕಾಶ್ಮೀರ ಪೊಲೀಸರು ಬುಧವಾರ ಟ್ವೀಟ್ ಮಾಡಿದ್ದಾರೆ.

ಕಾಬೂಲ್ ಅನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡಾಗ ಸ್ಥಳೀಯ ಯುವಕರು ನಾಪತ್ತೆಯಾಗಿದ್ದಾರೆ ಎಂದು ಇತ್ತೀಚಿನ ದಿನಗಳಲ್ಲಿ ಹಲವು ಮಾಧ್ಯಮ ವರದಿಗಳು ಹೇಳಿವೆ. ಅಲ್ಲದೆ, ಪಾಕಿಸ್ತಾನದಿಂದ ಕಣಿವೆಯೊಳಗೆ ಹಲವು ಉಗ್ರಗಾಮಿ ಗುಂಪುಗಳು ನುಸುಳಿದ್ದು, ಹಿಂಸಾಚಾರ ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ. ಆದರೆ, ಕಣ್ಮರೆಯಾದ ಯುವಕರ ಬಗ್ಗೆ ಹೆಚ್ಚು ವಿವರಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT