ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದೇ ಭಾರತ್‌ ರೈಲು ಸೇವೆಗೆ 60 ಸಂಸದರ ಬೇಡಿಕೆ

Last Updated 21 ಫೆಬ್ರವರಿ 2023, 14:45 IST
ಅಕ್ಷರ ಗಾತ್ರ

ನವದೆಹಲಿ: ವಂದೇ ಭಾರತ್‌ ರೈಲು ಸೇವೆಯು ಜನಪ್ರಿಯವಾಗುತ್ತಿರುವ ಕಾರಣ ಇದರ ಸೇವೆಯನ್ನು ತಮ್ಮ ಕ್ಷೇತ್ರಗಳಿಗೂ ಒದಗಿಸಬೇಕೆಂದು ಕೋರಿ ಎನ್‌ಡಿಎಯೇತರ 14 ಸಂಸದರು ಸೇರಿದಂತೆ 60 ಸಂಸದರು ರೈಲ್ವೆಗೆ ಮನವಿ ಸಲ್ಲಿಸಿದ್ದಾರೆ.

ಧಾರವಾಡ–ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಆರಂಭಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮನವಿ ಮಾಡಿದ್ದಾರೆ. ಗ್ವಾಲಿಯರ್‌ನಲ್ಲೂ ಇದರ ಸೇವೆ ಒದಗಿಸಬೇಕೆಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೂ ರೈಲ್ವೆಗೆ ಮನವಿ ಮಾಡಿದ್ದಾರೆ.

ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಎಎಪಿಯ, ಕಾಂಗ್ರೆಸ್‌, ಸಿಪಿಎಂ, ವೈಎಸ್ಆರ್‌ಸಿಪಿ, ಅಪ್ನಾ ದಳ ಮತ್ತು ಶಿವಸೇನಾದ ಸಂಸದರು ಕೂಡ ಈ ರೈಲಿನ ಸೇವೆಗಾಗಿ ಕೋರಿಕೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೊಲ್ಲಾಪುರ –ಮುಂಬೈ ನಡುವೆ ವಂದೇ ಭಾರತ್‌ ರೈಲು ಸೇವೆ ಆರಂಭಿಸಬೇಕೆಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಕೂಡ ಮನವಿ ಮಾಡಿದ್ದಾರೆ.

ಸದ್ಯ 10 ವಂದೇ ಭಾರತ್‌ ರೈಲುಗಳು ದೇಶದ ವಿವಿಧೆಡೆ ಸಂಚಾರ ನಡೆಸುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT