ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ಕರ್ಮಪೂಜಾ ವಿಧಿ ವಿಧಾನ ಮಾಡುವಾಗ ಹೊಂಡದಲ್ಲಿ ಮುಳುಗಿ 7 ಬಾಲಕಿಯರ ಸಾವು!

Last Updated 18 ಸೆಪ್ಟೆಂಬರ್ 2021, 12:56 IST
ಅಕ್ಷರ ಗಾತ್ರ

ಲಾತೇಹಾರ್‌, ಜಾರ್ಖಂಡ್: ‘ಕರ್ಮ ಪೂಜಾ’ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ನಡೆಯುವ ವಿಸರ್ಜನೆ ಕಾರ್ಯಕ್ರಮಕ್ಕಾಗಿ ತೆರಳಿದ್ದ ವೇಳೆ ಏಳು ಬಾಲಕಿಯರು ಹೊಂಡದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಲಾತೇಹಾರ್‌ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.

ಜಿಲ್ಲೆಯ ಬಾಲೂಮಠ ಪೊಲೀಸ್‌ ಠಾಣೆ ವ್ಯಾಪ್ತಿಯ ಬುಕ್ರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಅಬು ಇಮ್ರಾನ್‌ ತಿಳಿಸಿದ್ದಾರೆ.

‘ಕರ್ಮ ಪೂಜಾ’ ಎಂಬುದು ಜಾರ್ಖಂಡ್‌ನಲ್ಲಿ ಆಚರಿಸಲಾಗುವ ದೊಡ್ಡ ಹಬ್ಬಗಳಲ್ಲೊಂದು. ಪ್ರಕೃತಿಯನ್ನು ಪೂಜಿಸುವ ಹಬ್ಬವಾಗಿದೆ.

‘ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ತೆರಳಿದ್ದು, ಹಲವರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT