<div class="field field-name-body field-type-text-with-summary field-label-hidden"><div class="field-items"><div class="field-item even"><p class="_yeti_done"><strong>ಚೆನ್ನೈ: </strong>ತಮಿಳುನಾಡಿನ ಕಡ್ಡಲೂರು ಜಿಲ್ಲೆಯಲ್ಲಿ ಶುಕ್ರವಾರ ಪಟಾಕಿ ಕಾರ್ಖಾನೆಯ ಘಟಕವೊಂದು ಸ್ಫೋಟಗೊಂಡ ಪರಿಣಾಮ ಘಟಕದ ಮಾಲೀಕರಾದ ಗಾಂಧಿಮತಿ ಮತ್ತು ಆಕೆಯ ಸಂಬಂಧಿ ಸೇರಿ ಏಳು ಮಹಿಳೆಯರು ಸಾವನ್ನಪ್ಪಿದ್ದು, ಇಬ್ಬರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.</p><p class="_yeti_done">ಚೆನ್ನೈನಿಂದ 245 ಕಿ.ಮೀ ದೂರವಿರುವ ಕಟ್ಟುಮನ್ನಾರ್ಕೋಯಿಲ್ ಬಳಿಯ ಕುರುಂಗುಡಿ ಗ್ರಾಮದ ಪಟಾಕಿ ಉತ್ಪಾದನಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವರ ಬಗ್ಗೆ ಶೋಕ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮೃತರ ಕುಟುಂಬಗಳಿಗೆ ತಲಾ ₹ 2ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p class="_yeti_done">‘ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಐವರು ಮಹಿಳೆಯರು ಸಾವನ್ನಪ್ಪಿದರು. ಕಟ್ಟಡದ ಕಾಂಕ್ರೀಟ್ ಅಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಹಿಳೆಯರು ಸಾವನ್ನಪ್ಪಿದರು’ ಎಂದು ಪೊಲೀಸರು ತಿಳಿಸಿದ್ದಾರೆ.</p><p class="_yeti_done">‘ಸ್ಫೋಟ ಬೆಂಕಿಯಿಂದ ಸಂಭವಿಸಿಲ್ಲ. ಬಹುಶಃ ನೈಟ್ರೇಟ್ನಂತಹ ಕೆಲ ರಾಸಾಯನಿಕಗಳನ್ನು ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಗ್ರಹಿಸಿಡಲಾಗಿತ್ತು. ಸ್ಫೋಟದ ಹಿಂದಿನ ಕಾರಣ ಪತ್ತೆ ಹಚ್ಚಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಶ್ರೀಅಭಿನವ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.</p></div></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div class="field field-name-body field-type-text-with-summary field-label-hidden"><div class="field-items"><div class="field-item even"><p class="_yeti_done"><strong>ಚೆನ್ನೈ: </strong>ತಮಿಳುನಾಡಿನ ಕಡ್ಡಲೂರು ಜಿಲ್ಲೆಯಲ್ಲಿ ಶುಕ್ರವಾರ ಪಟಾಕಿ ಕಾರ್ಖಾನೆಯ ಘಟಕವೊಂದು ಸ್ಫೋಟಗೊಂಡ ಪರಿಣಾಮ ಘಟಕದ ಮಾಲೀಕರಾದ ಗಾಂಧಿಮತಿ ಮತ್ತು ಆಕೆಯ ಸಂಬಂಧಿ ಸೇರಿ ಏಳು ಮಹಿಳೆಯರು ಸಾವನ್ನಪ್ಪಿದ್ದು, ಇಬ್ಬರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.</p><p class="_yeti_done">ಚೆನ್ನೈನಿಂದ 245 ಕಿ.ಮೀ ದೂರವಿರುವ ಕಟ್ಟುಮನ್ನಾರ್ಕೋಯಿಲ್ ಬಳಿಯ ಕುರುಂಗುಡಿ ಗ್ರಾಮದ ಪಟಾಕಿ ಉತ್ಪಾದನಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವರ ಬಗ್ಗೆ ಶೋಕ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮೃತರ ಕುಟುಂಬಗಳಿಗೆ ತಲಾ ₹ 2ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p class="_yeti_done">‘ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಐವರು ಮಹಿಳೆಯರು ಸಾವನ್ನಪ್ಪಿದರು. ಕಟ್ಟಡದ ಕಾಂಕ್ರೀಟ್ ಅಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಹಿಳೆಯರು ಸಾವನ್ನಪ್ಪಿದರು’ ಎಂದು ಪೊಲೀಸರು ತಿಳಿಸಿದ್ದಾರೆ.</p><p class="_yeti_done">‘ಸ್ಫೋಟ ಬೆಂಕಿಯಿಂದ ಸಂಭವಿಸಿಲ್ಲ. ಬಹುಶಃ ನೈಟ್ರೇಟ್ನಂತಹ ಕೆಲ ರಾಸಾಯನಿಕಗಳನ್ನು ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಗ್ರಹಿಸಿಡಲಾಗಿತ್ತು. ಸ್ಫೋಟದ ಹಿಂದಿನ ಕಾರಣ ಪತ್ತೆ ಹಚ್ಚಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಶ್ರೀಅಭಿನವ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.</p></div></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>