<p><strong>ನವದೆಹಲಿ: </strong>ಕೋವಿಡ್ ಎದುರಿಸಲು ಆಸ್ಪತ್ರೆಗಳಲ್ಲಿ ಏಳು ಲಕ್ಷಕ್ಕೂ ಹೆಚ್ಚು ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ಹೇಳಿದ್ದಾರೆ.</p>.<p>‘ಜಗತ್ತಿನಾದ್ಯಂತ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ನ 9.64 ಲಕ್ಷ ಪ್ರಕರಣಗಳು ಗುರುವಾರ ವರದಿಯಾಗಿವೆ. ಜಗತ್ತು ಕೋವಿಡ್ನ ನಾಲ್ಕನೇ ಅಲೆಗೆ ಸಾಕ್ಷಿಯಾಗಿದೆ. ನಾವು ನಮ್ಮ ಎಚ್ಚರ ಕೈಬಿಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಭಾರತದಲ್ಲಿ ಸೋಂಕಿತರ ಸಂಖ್ಯೆಯು ಕಡಿಮೆ ಆಗುತ್ತಿದೆ. ಹಾಗಿದ್ದರೂ ಓಮೈಕ್ರಾನ್ ಪ್ರಕರಣಗಳು ನಿಧಾನಗತಿಯಲ್ಲಿ ಏರುತ್ತಿವೆ.</p>.<p>ಶುಕ್ರವಾರ ಬೆಳಿಗ್ಗಿನ ಹೊತ್ತಿಗೆ ದೇಶದಲ್ಲಿ 358 ಪ್ರಕರಣಗಳು ದೃಢಪಟ್ಟಿದ್ದವು. ಮಹಾರಾಷ್ಟ್ರ, ದೆಹಲಿ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿಯೇ ಸುಮಾರು 250 ಪ್ರಕರಣಗಳು ವರದಿಯಾಗಿವೆ. </p>.<p>ಕೋವಿಡ್–19 ಪ್ರಕರಣಗಳು ಕೂಡ ಮುಂಬೈ ಮತ್ತು ದೆಹಲಿಯಲ್ಲಿ ಏರಿಕೆ ಕಂಡಿವೆ. ಮುಂಬೈಯಲ್ಲಿ ಸತತ ಮೂರು ದಿನಗಳಿಂದ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ದೆಹಲಿಯಲ್ಲಿ ಶುಕ್ರವಾರ 180 ಪ್ರಕರಣಗಳು ದೃಢಪಟ್ಟಿವೆ.<br />ಇದು ಎರಡು ತಿಂಗಳಲ್ಲಿಯೇ ಅತಿ ಹೆಚ್ಚು.</p>.<p>ಆಮ್ಲಜನಕ ಸೌಲಭ್ಯ ಇರುವ 4.94 ಲಕ್ಷ ಹಾಸಿಗೆಗಳು ಸಿದ್ಧವಿವೆ. 1.39 ಲಕ್ಷ ಐಸಿಯು ಹಾಸಿಗೆಗಳಿವೆ. 1.2 ಲಕ್ಷ ಐಸಿಯು ಹಾಸಿಗೆಗಳನ್ನು ಕೇಂದ್ರ ಸರ್ಕಾರವು ಮಂಜೂರು ಮಾಡಿದೆ ಎಂದು ಭೂಷಣ್ ತಿಳಿಸಿದ್ದಾರೆ.</p>.<p>ವೈದ್ಯಕೀಯ ಆಮ್ಲಜನಕ ಸಿದ್ಧಪಡಿಸುವ ಪ್ರತಿ ದಿನದ ಸಾಮರ್ಥ್ಯ 18 ಸಾವಿರ ಟನ್ಗೆ ಏರಿದೆ. ಇದು ಎರಡನೇ ಅಲೆಯ ಸಂದರ್ಭದ ಸಾಮರ್ಥ್ಯಕ್ಕಿಂತ ಶೇ 80ರಷ್ಟು ಹೆಚ್ಚು ಎಂದು ಅವರು ಮಾಹಿತಿ ಕೊಟ್ಟಿದ್ದಾರೆ.</p>.<p><strong>ತಿರುಮಲ ಪ್ರವೇಶಕ್ಕೆ ಲಸಿಕೆ ಕಡ್ಡಾಯ</strong><br />ತಿರುಮಲದ ವೆಂಕಟೇಶ್ವರ ದೇವಾಲಯಕ್ಕೆ ಹೋಗುವ ಭಕ್ತರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡ ಪ್ರಮಾಣಪತ್ರ ತೋರಿಸುವುದು ಕಡ್ಡಾಯ. ಅದು ಇಲ್ಲದೇ ಇದ್ದರೆ, 48 ಗಂಟೆಗಳ ಮೊದಲು ಪಡೆದುಕೊಂಡ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ತೋರಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರಮಾಣಪತ್ರ ಇಲ್ಲದವರನ್ನು ಬೆಟ್ಟದ ಕೆಳಭಾಗದ ತಪಾಸಣಾ ಠಾಣೆ ಅಲಿಪಿರಿಯಿಂದಲೇ ಹಿಂದಕ್ಕೆ ಕಳುಹಿಸಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್ ಎದುರಿಸಲು ಆಸ್ಪತ್ರೆಗಳಲ್ಲಿ ಏಳು ಲಕ್ಷಕ್ಕೂ ಹೆಚ್ಚು ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ಹೇಳಿದ್ದಾರೆ.</p>.<p>‘ಜಗತ್ತಿನಾದ್ಯಂತ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ನ 9.64 ಲಕ್ಷ ಪ್ರಕರಣಗಳು ಗುರುವಾರ ವರದಿಯಾಗಿವೆ. ಜಗತ್ತು ಕೋವಿಡ್ನ ನಾಲ್ಕನೇ ಅಲೆಗೆ ಸಾಕ್ಷಿಯಾಗಿದೆ. ನಾವು ನಮ್ಮ ಎಚ್ಚರ ಕೈಬಿಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಭಾರತದಲ್ಲಿ ಸೋಂಕಿತರ ಸಂಖ್ಯೆಯು ಕಡಿಮೆ ಆಗುತ್ತಿದೆ. ಹಾಗಿದ್ದರೂ ಓಮೈಕ್ರಾನ್ ಪ್ರಕರಣಗಳು ನಿಧಾನಗತಿಯಲ್ಲಿ ಏರುತ್ತಿವೆ.</p>.<p>ಶುಕ್ರವಾರ ಬೆಳಿಗ್ಗಿನ ಹೊತ್ತಿಗೆ ದೇಶದಲ್ಲಿ 358 ಪ್ರಕರಣಗಳು ದೃಢಪಟ್ಟಿದ್ದವು. ಮಹಾರಾಷ್ಟ್ರ, ದೆಹಲಿ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿಯೇ ಸುಮಾರು 250 ಪ್ರಕರಣಗಳು ವರದಿಯಾಗಿವೆ. </p>.<p>ಕೋವಿಡ್–19 ಪ್ರಕರಣಗಳು ಕೂಡ ಮುಂಬೈ ಮತ್ತು ದೆಹಲಿಯಲ್ಲಿ ಏರಿಕೆ ಕಂಡಿವೆ. ಮುಂಬೈಯಲ್ಲಿ ಸತತ ಮೂರು ದಿನಗಳಿಂದ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ದೆಹಲಿಯಲ್ಲಿ ಶುಕ್ರವಾರ 180 ಪ್ರಕರಣಗಳು ದೃಢಪಟ್ಟಿವೆ.<br />ಇದು ಎರಡು ತಿಂಗಳಲ್ಲಿಯೇ ಅತಿ ಹೆಚ್ಚು.</p>.<p>ಆಮ್ಲಜನಕ ಸೌಲಭ್ಯ ಇರುವ 4.94 ಲಕ್ಷ ಹಾಸಿಗೆಗಳು ಸಿದ್ಧವಿವೆ. 1.39 ಲಕ್ಷ ಐಸಿಯು ಹಾಸಿಗೆಗಳಿವೆ. 1.2 ಲಕ್ಷ ಐಸಿಯು ಹಾಸಿಗೆಗಳನ್ನು ಕೇಂದ್ರ ಸರ್ಕಾರವು ಮಂಜೂರು ಮಾಡಿದೆ ಎಂದು ಭೂಷಣ್ ತಿಳಿಸಿದ್ದಾರೆ.</p>.<p>ವೈದ್ಯಕೀಯ ಆಮ್ಲಜನಕ ಸಿದ್ಧಪಡಿಸುವ ಪ್ರತಿ ದಿನದ ಸಾಮರ್ಥ್ಯ 18 ಸಾವಿರ ಟನ್ಗೆ ಏರಿದೆ. ಇದು ಎರಡನೇ ಅಲೆಯ ಸಂದರ್ಭದ ಸಾಮರ್ಥ್ಯಕ್ಕಿಂತ ಶೇ 80ರಷ್ಟು ಹೆಚ್ಚು ಎಂದು ಅವರು ಮಾಹಿತಿ ಕೊಟ್ಟಿದ್ದಾರೆ.</p>.<p><strong>ತಿರುಮಲ ಪ್ರವೇಶಕ್ಕೆ ಲಸಿಕೆ ಕಡ್ಡಾಯ</strong><br />ತಿರುಮಲದ ವೆಂಕಟೇಶ್ವರ ದೇವಾಲಯಕ್ಕೆ ಹೋಗುವ ಭಕ್ತರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡ ಪ್ರಮಾಣಪತ್ರ ತೋರಿಸುವುದು ಕಡ್ಡಾಯ. ಅದು ಇಲ್ಲದೇ ಇದ್ದರೆ, 48 ಗಂಟೆಗಳ ಮೊದಲು ಪಡೆದುಕೊಂಡ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ತೋರಿಸಬೇಕು ಎಂದು ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪ್ರಮಾಣಪತ್ರ ಇಲ್ಲದವರನ್ನು ಬೆಟ್ಟದ ಕೆಳಭಾಗದ ತಪಾಸಣಾ ಠಾಣೆ ಅಲಿಪಿರಿಯಿಂದಲೇ ಹಿಂದಕ್ಕೆ ಕಳುಹಿಸಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>