<p><strong>ನವದೆಹಲಿ: </strong>ಮೂರೂ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7 ತಿಂಗಳು ಮುಗಿಸಿ 8ನೇ ತಿಂಗಳಿಗೆ ಕಾಲಿಟ್ಟಿದೆ. ರೈತ ಮುಖಂಡರು ಈಗಲೂ ತಮ್ಮ ಬೇಡಿಕೆಗೆ ಅಂಟಿಕೊಂಡಿದ್ದು, ಕಾಯ್ದೆಗಳನ್ನು ಹಿಂಪಡೆಯದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರವೇ ರೈತರು ಪ್ರತಿಭಟನೆಯನ್ನು ಕೊನೆಗೊಳಿಸುತ್ತಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ನ ಪ್ರಧಾನ ಕಾರ್ಯದರ್ಶಿ ಯುಧ್ವೀರ್ ಸಿಂಗ್ ಹೇಳಿದ್ದಾರೆ.</p>.<p>‘ಸರ್ಕಾರವು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಮಾತನಾಡುವುದಿಲ್ಲ. ಸರ್ಕಾರವು ಯಾವಾಗಲೂ ಕಾನೂನುಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಮಾತನಾಡುತ್ತದೆ. ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ನಾವು ಬಯಸುತ್ತೇವೆ. ಎಂಎಸ್ಪಿ ಕುರಿತು ಕಾನೂನನ್ನು ಪರಿಚಯಿಸಬೇಕು’ ಎಂದು ಸಿಂಗ್ ಹೇಳಿದರು.</p>.<p>ಕಾಯ್ದೆಗಳನ್ನು ಹಿಂಪಡೆಯದ ಹೊರತು ನಾವು ಯಾವುದೇ ಪೂರ್ವ ಭರವಸೆ ಮೇಲೆ ಮಾತುಕತೆಗೆ ಬರುವುದಿಲ್ಲ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ಶಿವಕುಮಾರ್ ಕಕ್ಕಾ ಹೇಳಿದರು.</p>.<p>‘ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿದರೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಯೊಂದಿಗೆ ಹೊಸ ಕಾನೂನು ಮಾಡಿದರೆ, ನಾವು ಅವರಿಗೆ ಧನ್ಯವಾದ ಅರ್ಪಿಸಿ ಪ್ರತಿಭಟನೆ ಹಿಂಪಡೆಯುತ್ತೇವೆ’ಎಂದು ಕಕ್ಕಾ ಹೇಳಿದರು.</p>.<p>ಸರ್ಕಾರ ಮತ್ತು ರೈತ ಸಂಘಗಳು ಈವರೆಗೆ 11 ಸುತ್ತಿನ ಮಾತುಕತೆ ನಡೆಸಿದ್ದು, ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಜನವರಿ 22 ರಂದು ಕೊನೆಯ ಬಾರಿ ಮಾತುಕತೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮೂರೂ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7 ತಿಂಗಳು ಮುಗಿಸಿ 8ನೇ ತಿಂಗಳಿಗೆ ಕಾಲಿಟ್ಟಿದೆ. ರೈತ ಮುಖಂಡರು ಈಗಲೂ ತಮ್ಮ ಬೇಡಿಕೆಗೆ ಅಂಟಿಕೊಂಡಿದ್ದು, ಕಾಯ್ದೆಗಳನ್ನು ಹಿಂಪಡೆಯದ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರವೇ ರೈತರು ಪ್ರತಿಭಟನೆಯನ್ನು ಕೊನೆಗೊಳಿಸುತ್ತಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ನ ಪ್ರಧಾನ ಕಾರ್ಯದರ್ಶಿ ಯುಧ್ವೀರ್ ಸಿಂಗ್ ಹೇಳಿದ್ದಾರೆ.</p>.<p>‘ಸರ್ಕಾರವು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಮಾತನಾಡುವುದಿಲ್ಲ. ಸರ್ಕಾರವು ಯಾವಾಗಲೂ ಕಾನೂನುಗಳಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಮಾತನಾಡುತ್ತದೆ. ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ನಾವು ಬಯಸುತ್ತೇವೆ. ಎಂಎಸ್ಪಿ ಕುರಿತು ಕಾನೂನನ್ನು ಪರಿಚಯಿಸಬೇಕು’ ಎಂದು ಸಿಂಗ್ ಹೇಳಿದರು.</p>.<p>ಕಾಯ್ದೆಗಳನ್ನು ಹಿಂಪಡೆಯದ ಹೊರತು ನಾವು ಯಾವುದೇ ಪೂರ್ವ ಭರವಸೆ ಮೇಲೆ ಮಾತುಕತೆಗೆ ಬರುವುದಿಲ್ಲ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ಶಿವಕುಮಾರ್ ಕಕ್ಕಾ ಹೇಳಿದರು.</p>.<p>‘ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿದರೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಯೊಂದಿಗೆ ಹೊಸ ಕಾನೂನು ಮಾಡಿದರೆ, ನಾವು ಅವರಿಗೆ ಧನ್ಯವಾದ ಅರ್ಪಿಸಿ ಪ್ರತಿಭಟನೆ ಹಿಂಪಡೆಯುತ್ತೇವೆ’ಎಂದು ಕಕ್ಕಾ ಹೇಳಿದರು.</p>.<p>ಸರ್ಕಾರ ಮತ್ತು ರೈತ ಸಂಘಗಳು ಈವರೆಗೆ 11 ಸುತ್ತಿನ ಮಾತುಕತೆ ನಡೆಸಿದ್ದು, ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಜನವರಿ 22 ರಂದು ಕೊನೆಯ ಬಾರಿ ಮಾತುಕತೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>