ನವದೆಹಲಿ: 70 ವರ್ಷಗಳ ಅವಧಿಯಲ್ಲಿ ಮಲಿನಗೊಂಡಿರುವ ಯಮುನಾ ನದಿಯನ್ನು ಕೇವಲ ಎರಡು ದಿನದಲ್ಲಿ ಶುದ್ಧಗೊಳಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಂಜ್ರಿವಾಲ್ ಗುರುವಾರ ಹೇಳಿದ್ದಾರೆ.
'2015ರ ದೆಹಲಿ ಚುನಾವಣೆ ವೇಳೆ, ನಾನು ಮುಂದಿನ ಚುನಾವಣೆ ವೇಳೆಗೆ ಯಮುನಾ ನದಿಯನ್ನು ಶುದ್ಧಗೊಳಿಸುವುದಾಗಿ ಜನರಿಗೆ ಭರವಸೆ ನೀಡಿದ್ದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕೆಲಸವನ್ನು ಆರಂಭಿಸಿದ್ದೇವೆ. ವೈಯಕ್ತಿಕವಾಗಿ ನಾನು ಮೇಲ್ವಿಚಾರಣೆ ನಡೆಸುತ್ತಿದ್ದೇನೆ' ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.