<p><strong>ಬುಲ್ಡಾಣಾ, ಮಹಾರಾಷ್ಟ್ರ:</strong> ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಿದ್ದರೆ 733 ಜೀವಗಳನ್ನು ಉಳಿಸಬಹುದಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದರು.</p>.<p>ಭಾರತ್ ಜೋಡೊ ಯಾತ್ರೆಯ ಭಾಗವಾಗಿ ಬುಲ್ಢಾಣಾ ಜಿಲ್ಲೆಯ ಭಸ್ತಾನ್ ಗ್ರಾಮದಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಕಳೆದ ವರ್ಷ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಸುದೀರ್ಘ ಕಾಲ ನಡೆಸಿದ ಚಳುವಳಿ ವೇಳೆ ಮೃತಪಟ್ಟ ರೈತರಿಗೆ ಸಂತಾಪ ವ್ಯಕ್ತಪಡಿಸಿದರು.</p>.<p>ರೈತರು ಈ ರಾಷ್ಟ್ರದ ಧ್ವನಿಯಾಗಿದ್ದಾರೆ. ಕೃಷಿ ಕಾಯ್ದೆಗಳು ರೈತರ ವಿರೋಧಿಯಾಗಿದ್ದವು. ಹಾಗಾಗಿ ಅವರು ದೆಹಲಿಯ ಹೊರಭಾಗದಲ್ಲಿ ಪ್ರತಿನಭಟನೆ ನಡೆಸಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರು. ಕೃಷಿ ಕಾಯ್ದೆಗಳನು ಕೆಲವು ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವಂತವುಗಳಾಗಿದ್ದವು ಎಂದು ರಾಹುಲ್ ಗಾಂಧಿ ಹೇಳಿದರು.</p>.<p>ಕೇಂದ್ರ ಸರ್ಕಾರಕ್ಕೆ ಪೊಲೀಸರಿದ್ದಾರೆ, ಶಸ್ತ್ರಾಸ್ತ್ರಗಳಿವೆ, ಆಡಳಿತದ ಅಧಿಕಾರವಿದೆ. ಆದರೆ ರೈತರಿಗೆ ಕೇವಲ ಅವರ ಧ್ವನಿಯಿದೆ. ಈ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಚಳುವಳಿ ಸಂದರ್ಭ 733 ರೈತರು ಪ್ರಾಣ ಕಳೆದುಕೊಂಡರು ಎಂದು ಬೇಸರಿಸಿದರು.</p>.<p><strong>ಸಂತಾಪ ಸೂಚಿಸುವ ವೇಳೆ ಪಟಾಕಿ: ರಾಹುಲ್ ಕಿಡಿ</strong><br />ರಾಹುಲ್ ಗಾಂಧಿ ಅವರು ಭಾಷಣವನ್ನು ಕೊನೆಗೊಳಿಸುತ್ತಿದ್ದಂತೆ ಸಭೆಯಲ್ಲಿದ್ದ ಎಲ್ಲರೂ ಎದ್ದು ನಿಂತು ಮೃತ ರೈತರಿಗೆ ಸಂತಾಪ ಸೂಚಿದರು. ಈ ವೇಳೆ ಸಭೆಯ ಸಮೀಪದಲ್ಲೇ ಕೆಲವು ಅಪರಿಚಿತರು ಪಟಾಕಿಗಳನ್ನು ಸಿಡಿಸಿದರು. ಇದರಿಂದ ಕೋಪಗೊಂಡ ರಾಹುಲ್ ಗಾಂಧಿ, ಪಟಾಕಿ ಹೊಡೆದವರು ಈ ರಾಷ್ಟ್ರದ ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನವೆಂಬರ್ 19 ಅನ್ನು ಕಾಂಗ್ರೆಸ್ ಕಿಸಾನ್ ವಿಜಯ್ ದಿವಸ್ (ರೈತರ ವಿಜಯದ ದಿನ)ವನ್ನಾಗಿ ಆಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬುಲ್ಡಾಣಾ, ಮಹಾರಾಷ್ಟ್ರ:</strong> ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಿದ್ದರೆ 733 ಜೀವಗಳನ್ನು ಉಳಿಸಬಹುದಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದರು.</p>.<p>ಭಾರತ್ ಜೋಡೊ ಯಾತ್ರೆಯ ಭಾಗವಾಗಿ ಬುಲ್ಢಾಣಾ ಜಿಲ್ಲೆಯ ಭಸ್ತಾನ್ ಗ್ರಾಮದಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಕಳೆದ ವರ್ಷ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಸುದೀರ್ಘ ಕಾಲ ನಡೆಸಿದ ಚಳುವಳಿ ವೇಳೆ ಮೃತಪಟ್ಟ ರೈತರಿಗೆ ಸಂತಾಪ ವ್ಯಕ್ತಪಡಿಸಿದರು.</p>.<p>ರೈತರು ಈ ರಾಷ್ಟ್ರದ ಧ್ವನಿಯಾಗಿದ್ದಾರೆ. ಕೃಷಿ ಕಾಯ್ದೆಗಳು ರೈತರ ವಿರೋಧಿಯಾಗಿದ್ದವು. ಹಾಗಾಗಿ ಅವರು ದೆಹಲಿಯ ಹೊರಭಾಗದಲ್ಲಿ ಪ್ರತಿನಭಟನೆ ನಡೆಸಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರು. ಕೃಷಿ ಕಾಯ್ದೆಗಳನು ಕೆಲವು ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವಂತವುಗಳಾಗಿದ್ದವು ಎಂದು ರಾಹುಲ್ ಗಾಂಧಿ ಹೇಳಿದರು.</p>.<p>ಕೇಂದ್ರ ಸರ್ಕಾರಕ್ಕೆ ಪೊಲೀಸರಿದ್ದಾರೆ, ಶಸ್ತ್ರಾಸ್ತ್ರಗಳಿವೆ, ಆಡಳಿತದ ಅಧಿಕಾರವಿದೆ. ಆದರೆ ರೈತರಿಗೆ ಕೇವಲ ಅವರ ಧ್ವನಿಯಿದೆ. ಈ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಚಳುವಳಿ ಸಂದರ್ಭ 733 ರೈತರು ಪ್ರಾಣ ಕಳೆದುಕೊಂಡರು ಎಂದು ಬೇಸರಿಸಿದರು.</p>.<p><strong>ಸಂತಾಪ ಸೂಚಿಸುವ ವೇಳೆ ಪಟಾಕಿ: ರಾಹುಲ್ ಕಿಡಿ</strong><br />ರಾಹುಲ್ ಗಾಂಧಿ ಅವರು ಭಾಷಣವನ್ನು ಕೊನೆಗೊಳಿಸುತ್ತಿದ್ದಂತೆ ಸಭೆಯಲ್ಲಿದ್ದ ಎಲ್ಲರೂ ಎದ್ದು ನಿಂತು ಮೃತ ರೈತರಿಗೆ ಸಂತಾಪ ಸೂಚಿದರು. ಈ ವೇಳೆ ಸಭೆಯ ಸಮೀಪದಲ್ಲೇ ಕೆಲವು ಅಪರಿಚಿತರು ಪಟಾಕಿಗಳನ್ನು ಸಿಡಿಸಿದರು. ಇದರಿಂದ ಕೋಪಗೊಂಡ ರಾಹುಲ್ ಗಾಂಧಿ, ಪಟಾಕಿ ಹೊಡೆದವರು ಈ ರಾಷ್ಟ್ರದ ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನವೆಂಬರ್ 19 ಅನ್ನು ಕಾಂಗ್ರೆಸ್ ಕಿಸಾನ್ ವಿಜಯ್ ದಿವಸ್ (ರೈತರ ವಿಜಯದ ದಿನ)ವನ್ನಾಗಿ ಆಚರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>