ಟಿಟಿಡಿ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದೇಗುಲದ ಬಾಗಿಲು ತೆರೆಯಲಾಗಿತ್ತು ಎಂದು ಕೆಲ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಅವರು ಅಲ್ಲಗಳೆದರು. ಭಕ್ತರ ಕೋರಿಕೆ ಪರಿಗಣಿಸಿ ದೇಗುಲ ತೆರೆಯಲಾಗಿದೆ. ಕೋವಿಡ್–19 ಕಾರಣ ವಿಧಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ ಎಂದು ಸಿಂಘಾಲ್ ಹೇಳಿದರು.