<p class="title"><strong>ಹಜಾರಿಬಾಗ್</strong>: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರಕ್ವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮಪಶ್ಚಿಮ ಬಂಗಾಳದ ಸುಮಾರು 75 ಮಂದಿ ಪ್ರವಾಸಿಗರು ಗಾಯಗೊಂಡಿದ್ದು 9 ಮಂದಿಯ ಸ್ಥಿತಿ ಗಂಭೀರವಾಗಿದೆ.</p>.<p class="title">ರಾಷ್ಟ್ರೀಯ ಹೆದ್ದಾರಿ 2ರ ದನುವಾ–ಭನುವಾ ಘಾಟ್ನಲ್ಲಿ ಈ ಅಪಘಾತ ಸಂಭವಿಸಿದೆ.ಪ್ರವಾಸಿಗರುಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿರುವ ಬಶೀರ್ಹತ್ನಿಂದ ಬೋಧಗಯಾಗೆ ಹೋಗುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p class="title">ಅಪಘಾತದಲ್ಲಿ ಗಾಯಗೊಂಡ ಯಾತ್ರಿಕರಿಗೆ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡ 9 ಮಂದಿಯನ್ನು ಹಜಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು.</p>.<p class="bodytext">ಆದರೆ, 9 ಮಂದಿ ಯಾತ್ರಿಕರ ಸಂಬಂಧಿಕರು ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ.ಯಾತ್ರಿಕರು ಬಿಹಾರದಲ್ಲಿನ ಬೋಧಗಯಾ ದರ್ಶನದ ನಂತರ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳಲು ಯೋಜಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಹಜಾರಿಬಾಗ್</strong>: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರಕ್ವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮಪಶ್ಚಿಮ ಬಂಗಾಳದ ಸುಮಾರು 75 ಮಂದಿ ಪ್ರವಾಸಿಗರು ಗಾಯಗೊಂಡಿದ್ದು 9 ಮಂದಿಯ ಸ್ಥಿತಿ ಗಂಭೀರವಾಗಿದೆ.</p>.<p class="title">ರಾಷ್ಟ್ರೀಯ ಹೆದ್ದಾರಿ 2ರ ದನುವಾ–ಭನುವಾ ಘಾಟ್ನಲ್ಲಿ ಈ ಅಪಘಾತ ಸಂಭವಿಸಿದೆ.ಪ್ರವಾಸಿಗರುಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿರುವ ಬಶೀರ್ಹತ್ನಿಂದ ಬೋಧಗಯಾಗೆ ಹೋಗುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p class="title">ಅಪಘಾತದಲ್ಲಿ ಗಾಯಗೊಂಡ ಯಾತ್ರಿಕರಿಗೆ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡ 9 ಮಂದಿಯನ್ನು ಹಜಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು.</p>.<p class="bodytext">ಆದರೆ, 9 ಮಂದಿ ಯಾತ್ರಿಕರ ಸಂಬಂಧಿಕರು ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ.ಯಾತ್ರಿಕರು ಬಿಹಾರದಲ್ಲಿನ ಬೋಧಗಯಾ ದರ್ಶನದ ನಂತರ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳಲು ಯೋಜಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>