ಪ್ರತಿ ಕ್ಷೇತ್ರದಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಒಳಗೊಂಡಂತೆ ತಂಡವನ್ನು ರಚಿಸಲು ಸಂಸದರಿಗೆ ಪ್ರಧಾನಿ ಸೂಚಿಸಿದ್ದಾರೆ. ಈ ತಂಡವು ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ 2047 ರ ವೇಳೆಗೆ, ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆಗೆ ಭಾರತವು ಹೇಗಿರಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.