ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಸಲಹೆ

ಸ್ವಾತಂತ್ರ್ಯ ಅಮೃತಮಹೋತ್ಸವ
Last Updated 5 ಆಗಸ್ಟ್ 2022, 16:07 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ‘ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ನಿತ್ರಾಣಗೊಂಡಿರುವ ಕೈದಿಗಳನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಬೇಕು. 14 ವರ್ಷಗಳ ಕಾಲ ಜೈಲಿನಲ್ಲಿರುವ ಕೈದಿಗಳ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬೇಕು’ ಎಂದು ತಿಳಿಸಿದೆ. ಸಾಧ್ಯವಾದರೆ ಶಿಕ್ಷೆ ಕಡಿತಕ್ಕೆ ಏಕರೂಪ ನೀತಿಯನ್ನು ಜಾರಿ ಮಾಡಬಹುದು ಎಂದು ಸಲಹೆ ನೀಡಿದೆ.

ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೈದಿಗಳನ್ನು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಾದರೂಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT