<p class="title"><strong>ನವದೆಹಲಿ: </strong>ಕಳೆದ 10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="title">ಈ ಬಗ್ಗೆ ವಿಚಾರಣೆ ನಡೆಸಿದ ಎಸ್.ಕೆ.ಕೌಲ್ ಮತ್ತು ಎಂ.ಎಂ.ಸುಂದರೇಶ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ‘ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ನಿತ್ರಾಣಗೊಂಡಿರುವ ಕೈದಿಗಳನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಬೇಕು. 14 ವರ್ಷಗಳ ಕಾಲ ಜೈಲಿನಲ್ಲಿರುವ ಕೈದಿಗಳ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬೇಕು’ ಎಂದು ತಿಳಿಸಿದೆ. ಸಾಧ್ಯವಾದರೆ ಶಿಕ್ಷೆ ಕಡಿತಕ್ಕೆ ಏಕರೂಪ ನೀತಿಯನ್ನು ಜಾರಿ ಮಾಡಬಹುದು ಎಂದು ಸಲಹೆ ನೀಡಿದೆ.</p>.<div><div>ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೈದಿಗಳನ್ನು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಾದರೂಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕಳೆದ 10 ವರ್ಷಗಳಿಂದ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p class="title">ಈ ಬಗ್ಗೆ ವಿಚಾರಣೆ ನಡೆಸಿದ ಎಸ್.ಕೆ.ಕೌಲ್ ಮತ್ತು ಎಂ.ಎಂ.ಸುಂದರೇಶ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ, ‘ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ನಿತ್ರಾಣಗೊಂಡಿರುವ ಕೈದಿಗಳನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಬೇಕು. 14 ವರ್ಷಗಳ ಕಾಲ ಜೈಲಿನಲ್ಲಿರುವ ಕೈದಿಗಳ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬೇಕು’ ಎಂದು ತಿಳಿಸಿದೆ. ಸಾಧ್ಯವಾದರೆ ಶಿಕ್ಷೆ ಕಡಿತಕ್ಕೆ ಏಕರೂಪ ನೀತಿಯನ್ನು ಜಾರಿ ಮಾಡಬಹುದು ಎಂದು ಸಲಹೆ ನೀಡಿದೆ.</p>.<div><div>ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೈದಿಗಳನ್ನು 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಾದರೂಬಿಡುಗಡೆ ಮಾಡಲು ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>