<p><strong>ನವದೆಹಲಿ</strong>: ದೆಹಲಿಯ ಕೆಂಪುಕೋಟೆಯಲ್ಲಿ ಆಯೋಜಿಸಲಾಗಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ಧ್ವಜಾರೋಹಣವನ್ನು ನೇರವೇರಿಸುತ್ತಿದ್ದಂತೆ ಭಾರತೀಯ ವಾಯುಪಡೆಯ ಎರಡು ’ಮಿ–17 1ವಿ’ ಹೆಲಿಕಾಪ್ಟರ್ಗಳು ಪುಷ್ಪವೃಷ್ಟಿ ಮಾಡಿವೆ.</p>.<p>ಈ ವೇಳೆ ಚಪ್ಪಾಳೆ ತಟ್ಟುವ ಮೂಲಕ ಪ್ರೇಕ್ಷಕರು ಹರ್ಷ ವ್ಯಕ್ತಪಡಿಸಿದರು. ಮೊದಲ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ಬಲದೇವ್ ಸಿಂಗ್ ಬಿಶ್ತ್ ಹಾಗೂ ಎರಡನೇ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ನಿಖಿಲ್ ಮೆಹ್ರೋತ್ರಾ ಅವರು ನಿರ್ವಹಿಸಿದರು. ತದನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.</p>.<p>ಈ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಸಾಧನೆಗೈದ ಒಲಿಂಪಿಕ್ಸ್ ಕ್ರೀಡಾಪಟುಗಳು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ(ಎಸ್ಎಐ) ಇಬ್ಬರು ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ವೈದ್ಯರು, ದಾದಿಯರು ಸೇರಿದಂತೆ ಕೋವಿಡ್ ಯೋಧರಿಗಾಗಿ ಕೆಂಪುಕೋಟೆಯಲ್ಲಿ ಪ್ರತ್ಯೇಕ ಬ್ಲಾಕ್ ಅನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಕೆಂಪುಕೋಟೆಯಲ್ಲಿ ಆಯೋಜಿಸಲಾಗಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ಧ್ವಜಾರೋಹಣವನ್ನು ನೇರವೇರಿಸುತ್ತಿದ್ದಂತೆ ಭಾರತೀಯ ವಾಯುಪಡೆಯ ಎರಡು ’ಮಿ–17 1ವಿ’ ಹೆಲಿಕಾಪ್ಟರ್ಗಳು ಪುಷ್ಪವೃಷ್ಟಿ ಮಾಡಿವೆ.</p>.<p>ಈ ವೇಳೆ ಚಪ್ಪಾಳೆ ತಟ್ಟುವ ಮೂಲಕ ಪ್ರೇಕ್ಷಕರು ಹರ್ಷ ವ್ಯಕ್ತಪಡಿಸಿದರು. ಮೊದಲ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ಬಲದೇವ್ ಸಿಂಗ್ ಬಿಶ್ತ್ ಹಾಗೂ ಎರಡನೇ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ನಿಖಿಲ್ ಮೆಹ್ರೋತ್ರಾ ಅವರು ನಿರ್ವಹಿಸಿದರು. ತದನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.</p>.<p>ಈ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಸಾಧನೆಗೈದ ಒಲಿಂಪಿಕ್ಸ್ ಕ್ರೀಡಾಪಟುಗಳು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ(ಎಸ್ಎಐ) ಇಬ್ಬರು ಅಧಿಕಾರಿಗಳು ಭಾಗವಹಿಸಿದ್ದರು.</p>.<p>ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ವೈದ್ಯರು, ದಾದಿಯರು ಸೇರಿದಂತೆ ಕೋವಿಡ್ ಯೋಧರಿಗಾಗಿ ಕೆಂಪುಕೋಟೆಯಲ್ಲಿ ಪ್ರತ್ಯೇಕ ಬ್ಲಾಕ್ ಅನ್ನು ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>