<p><strong>ಭೋಪಾಲ್/ಕೋಟಾ/ಕೋಲ್ಕತ್ತ:</strong> ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಬೀಳುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳ ಹೆಚ್ಚು ಬಾಧಿತವಾಗಿದ್ದು, ಜನರು ಪರದಾಡುತ್ತಿದ್ದಾರೆ.</p>.<p>ಪಶ್ಚಿಮ ಬಂಗಾಳದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜನರ ಸ್ಥಳಾಂತರ ಹಾಗೂ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.</p>.<p>ಮಧ್ಯಪ್ರದೇಶದ ಗ್ವಾಲಿಯರ್ ಹಾಗೂ ಚಂಬಲ್ ವಿಭಾಗಗಗಳಲ್ಲಿ ಭಾರಿ ಪ್ರಮಾಣದ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಬೀಳುತ್ತಿದ್ದು, 12 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪ್ರವಾಹ ಪೀಡಿತ ಪ್ರದೇಶಗಳಿಂದ ಈ ವರೆಗೆ 8,832 ಜನರನ್ನು ರಕ್ಷಿಸಲಾಗಿದೆ. 29,280 ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಶನಿವಾರ ಹೇಳಿದ್ದಾರೆ.</p>.<p>‘ಶನಿವಾರವಷ್ಟೇ 40 ಜನರನ್ನು ರಕ್ಷಿಸಲಾಗಿದೆ. ಗುನಾ, ಅಶೋಕನಗರ, ವಿದಿಶಾ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯದ ಮಾಹಿತಿ ಪಡೆದಿದ್ದೇನೆ‘ ಎಂದು ಅವರು ಹೇಳಿದ್ದಾರೆ.</p>.<p>‘ಭಾರತೀಯ ವಾಯುಪಡೆ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಸಿಬ್ಬಂದಿ ಹಗಲು–ರಾತ್ರಿ ಎನ್ನದೇ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದೂ ಅವರು ಟ್ವೀಟ್ ಮಾಡಿದ್ದಾರೆ.</p>.<p>ಅಶೋಕನಗರ ಜಿಲ್ಲೆಯ ಬಾರ್ರಿ ಹಾಗೂ ಸಿರ್ಸೋರಾ ಗ್ರಾಮಗಳಲ್ಲಿ ತಲಾ 15 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. ಇದೇ ಜಿಲ್ಲೆಯ ವಸುನಿಯಾ ಘಾಟ್ ಗ್ರಾಮದ 6 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.</p>.<p><strong>ಮಾಲ್ಡಾ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು</strong></p>.<p>ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಗಂಗಾ, ಫುಲ್ಹಾರ್ ಹಾಗೂ ಮಹಾನಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದೆ.</p>.<p>ಹೂಗ್ಲಿ ಜಿಲ್ಲೆಯಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಭದ್ರತಾ ಪಡೆಗಳ ಯೋಧರು, ಎನ್ಡಿಆರ್ಎಫ್ ಸಿಬ್ಬಂದಿ, ಆಹಾರ, ಔಷಧಗಳು ಹಾಗೂ ಪರಿಹಾರ ಸಾಮಗ್ರಿಗಳನ್ನ ವಿತರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದಕ್ಷಿಣ ಭಾಗದ ಜಿಲ್ಲೆಗಳಾದ ಹೂಗ್ಲಿ, ದಕ್ಷಿಣ 24 ಪರಗಣ, ಪೂರ್ವ ಮೇದಿನಿಪುರ ಹಾಗೂ ಹೌರಾ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನರು ಪರದಾಡುವಂತಾಗಿದೆ.</p>.<p>ದಾಮೋದರ ವ್ಯಾಲಿ ಕಾರ್ಪೋರೇಷನ್ (ಡಿವಿಸಿ)ವ್ಯಾಪ್ತಿಯ ಅಣೆಕಟ್ಟುಗಳಿಂದ 29,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ.</p>.<p>‘ಪ್ರವಾಹದಿಂದಾಗಿ ಈವರೆಗೆ ಕನಿಷ್ಠ 23 ಜನರು ಮೃತಪಟ್ಟಿದ್ದು, ಲಕ್ಷಾಂತರ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಭಾರಿ ಪ್ರಮಾಣದಲ್ಲಿ ನದಿಗೆ ನೀರನ್ನು ಬಿಟ್ಟಿರುವ ಕಾರಣ ಜನರು ತೊಂದರೆ ಅನುಭವಿಸುವಂತಾಗಿದೆ. ನದಿಗೆ ನೀರು ಬಿಡುವುದನ್ನು ಡಿವಿಸಿ ನಿಲ್ಲಿಸಿದರೆ ಪರಿಸ್ಥಿತಿ ಸುಧಾರಿಸಲಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಭಾರಿ ಸಂಖ್ಯೆಯಲ್ಲಿ ಜನರು ತೊಂದರೆ ಅನುಭವಿಸುವಂತಾಗಿದೆ. ಅವರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ’ ಎಂದು ಹೂಗ್ಲಿ ಜಿಲ್ಲಾಧಿಕಾರಿ ದೀಪವ್ ಪ್ರಿಯಾ ಹೇಳಿದ್ದಾರೆ.</p>.<p>‘45 ಯೋಧರನ್ನು ಒಳಗೊಂಡ ತಂಡ ಹೂಗ್ಲಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ’ ಎಂದು ರಕ್ಷಣಾ ಇಲಾಖೆಯ ವಕ್ತಾರರೊಬ್ಬರು ತಿಳಿಸಿದರು.</p>.<p class="Briefhead"><strong>ರಾಜಸ್ಥಾನ: ಓಂ ಬಿರ್ಲಾ ಅವರಿಂದ ವೈಮಾನಿಕ ಸಮೀಕ್ಷೆ</strong></p>.<p>ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರುಕೋಟಾ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಬಿರ್ಲಾ ಅವರು ಬೂಂದಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.</p>.<p>‘ಕೋಟಾ ಜಿಲ್ಲೆಯ ಸಂಗೋಡ್ ಪ್ರದೇಶದಲ್ಲಿ ಶನಿವಾರ 140 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ’ ಎಂದು ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳಲ್ಲದೇ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್/ಕೋಟಾ/ಕೋಲ್ಕತ್ತ:</strong> ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಬೀಳುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳ ಹೆಚ್ಚು ಬಾಧಿತವಾಗಿದ್ದು, ಜನರು ಪರದಾಡುತ್ತಿದ್ದಾರೆ.</p>.<p>ಪಶ್ಚಿಮ ಬಂಗಾಳದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜನರ ಸ್ಥಳಾಂತರ ಹಾಗೂ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.</p>.<p>ಮಧ್ಯಪ್ರದೇಶದ ಗ್ವಾಲಿಯರ್ ಹಾಗೂ ಚಂಬಲ್ ವಿಭಾಗಗಗಳಲ್ಲಿ ಭಾರಿ ಪ್ರಮಾಣದ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಬೀಳುತ್ತಿದ್ದು, 12 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪ್ರವಾಹ ಪೀಡಿತ ಪ್ರದೇಶಗಳಿಂದ ಈ ವರೆಗೆ 8,832 ಜನರನ್ನು ರಕ್ಷಿಸಲಾಗಿದೆ. 29,280 ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಶನಿವಾರ ಹೇಳಿದ್ದಾರೆ.</p>.<p>‘ಶನಿವಾರವಷ್ಟೇ 40 ಜನರನ್ನು ರಕ್ಷಿಸಲಾಗಿದೆ. ಗುನಾ, ಅಶೋಕನಗರ, ವಿದಿಶಾ ಜಿಲ್ಲೆಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯದ ಮಾಹಿತಿ ಪಡೆದಿದ್ದೇನೆ‘ ಎಂದು ಅವರು ಹೇಳಿದ್ದಾರೆ.</p>.<p>‘ಭಾರತೀಯ ವಾಯುಪಡೆ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಸಿಬ್ಬಂದಿ ಹಗಲು–ರಾತ್ರಿ ಎನ್ನದೇ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದೂ ಅವರು ಟ್ವೀಟ್ ಮಾಡಿದ್ದಾರೆ.</p>.<p>ಅಶೋಕನಗರ ಜಿಲ್ಲೆಯ ಬಾರ್ರಿ ಹಾಗೂ ಸಿರ್ಸೋರಾ ಗ್ರಾಮಗಳಲ್ಲಿ ತಲಾ 15 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. ಇದೇ ಜಿಲ್ಲೆಯ ವಸುನಿಯಾ ಘಾಟ್ ಗ್ರಾಮದ 6 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.</p>.<p><strong>ಮಾಲ್ಡಾ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು</strong></p>.<p>ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಗಂಗಾ, ಫುಲ್ಹಾರ್ ಹಾಗೂ ಮಹಾನಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದೆ.</p>.<p>ಹೂಗ್ಲಿ ಜಿಲ್ಲೆಯಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಭದ್ರತಾ ಪಡೆಗಳ ಯೋಧರು, ಎನ್ಡಿಆರ್ಎಫ್ ಸಿಬ್ಬಂದಿ, ಆಹಾರ, ಔಷಧಗಳು ಹಾಗೂ ಪರಿಹಾರ ಸಾಮಗ್ರಿಗಳನ್ನ ವಿತರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದಕ್ಷಿಣ ಭಾಗದ ಜಿಲ್ಲೆಗಳಾದ ಹೂಗ್ಲಿ, ದಕ್ಷಿಣ 24 ಪರಗಣ, ಪೂರ್ವ ಮೇದಿನಿಪುರ ಹಾಗೂ ಹೌರಾ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನರು ಪರದಾಡುವಂತಾಗಿದೆ.</p>.<p>ದಾಮೋದರ ವ್ಯಾಲಿ ಕಾರ್ಪೋರೇಷನ್ (ಡಿವಿಸಿ)ವ್ಯಾಪ್ತಿಯ ಅಣೆಕಟ್ಟುಗಳಿಂದ 29,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ.</p>.<p>‘ಪ್ರವಾಹದಿಂದಾಗಿ ಈವರೆಗೆ ಕನಿಷ್ಠ 23 ಜನರು ಮೃತಪಟ್ಟಿದ್ದು, ಲಕ್ಷಾಂತರ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಭಾರಿ ಪ್ರಮಾಣದಲ್ಲಿ ನದಿಗೆ ನೀರನ್ನು ಬಿಟ್ಟಿರುವ ಕಾರಣ ಜನರು ತೊಂದರೆ ಅನುಭವಿಸುವಂತಾಗಿದೆ. ನದಿಗೆ ನೀರು ಬಿಡುವುದನ್ನು ಡಿವಿಸಿ ನಿಲ್ಲಿಸಿದರೆ ಪರಿಸ್ಥಿತಿ ಸುಧಾರಿಸಲಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಭಾರಿ ಸಂಖ್ಯೆಯಲ್ಲಿ ಜನರು ತೊಂದರೆ ಅನುಭವಿಸುವಂತಾಗಿದೆ. ಅವರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ’ ಎಂದು ಹೂಗ್ಲಿ ಜಿಲ್ಲಾಧಿಕಾರಿ ದೀಪವ್ ಪ್ರಿಯಾ ಹೇಳಿದ್ದಾರೆ.</p>.<p>‘45 ಯೋಧರನ್ನು ಒಳಗೊಂಡ ತಂಡ ಹೂಗ್ಲಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ’ ಎಂದು ರಕ್ಷಣಾ ಇಲಾಖೆಯ ವಕ್ತಾರರೊಬ್ಬರು ತಿಳಿಸಿದರು.</p>.<p class="Briefhead"><strong>ರಾಜಸ್ಥಾನ: ಓಂ ಬಿರ್ಲಾ ಅವರಿಂದ ವೈಮಾನಿಕ ಸಮೀಕ್ಷೆ</strong></p>.<p>ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರುಕೋಟಾ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಬಿರ್ಲಾ ಅವರು ಬೂಂದಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.</p>.<p>‘ಕೋಟಾ ಜಿಲ್ಲೆಯ ಸಂಗೋಡ್ ಪ್ರದೇಶದಲ್ಲಿ ಶನಿವಾರ 140 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ’ ಎಂದು ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳಲ್ಲದೇ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>