<p><strong>ಲಖನೌ:</strong> ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿಯೋಗಿ ಆದಿತ್ಯನಾಥ ಅಧಿಕಾರ ಸ್ವೀಕರಿಸಿದ್ದು, ಸಂಪುಟದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡಿದ್ದಾರೆ.</p>.<p>2024ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ,ಯೋಗಿ ಸಂಪುಟದಲ್ಲಿ ಬ್ರಾಹ್ಮಣರು, ಜಾಟರು, ಪರಿಶಿಷ್ಟ ಜಾತಿಗಳು, ಇತರೆ ಹಿಂದುಳಿದ ವರ್ಗಗಳಿಗೆ ಸಿಂಹಪಾಲು ಪ್ರಾತಿನಿಧ್ಯ ನೀಡಲಾಗಿದೆ.</p>.<p>ಮುಸ್ಲಿಮರು ಮತ್ತು ಪಂಜಾಬಿ ಸಮುದಾಯದವರಿಗೂ ಸಚಿವ ಸ್ಥಾನ ನೀಡುವ ಮೂಲಕ ಮುಂದಿನ ಚುನಾವಣೆ ವೇಳೆಗೆ ಜಾತಿ ಮತ್ತು ಧರ್ಮಗಳ ಸಮೀಕರಣಕ್ಕೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.</p>.<p>ವಿಧಾನಸಭಾ ಚುನಾವಣೆಗೂ ಮುನ್ನ ಈ ಸಮುದಾಯದ ನಾಯಕರು ಬಿಜೆಪಿಯಿಂದ ದೂರ ಸರಿದಿದ್ದರು. ಇವರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಮೂಲಕ ಈ ಸಮುದಾಯಗಳನ್ನು ಸಮಾಧಾನಪಡಿಸಲು ಬಿಜೆಪಿ ಮುಂದಾಗಿದೆ.</p>.<p>9 ಜನ ದಲಿತರು, 20 ಜನ ಹಿಂದುಳಿದ ವರ್ಗದವರು ಸೇರಿದಂತೆ ಮುಸ್ಲಿಂ ಹಾಗೂ ಪಂಜಾಬಿ ಸಮುದಾಯದ ತಲಾ ಒಬ್ಬರು ಯೋಗಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.</p>.<p>ಈ ಹಿಂದಿನ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಬ್ರಾಹ್ಮಣ ಸಮುದಾಯದ ಬ್ರಜೇಶ್ ಪಾಠಕ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಹಿಂದುಳಿದ ವರ್ಗಗಳ ಕೇಶವ ಪ್ರಸಾದ್ ಮೌರ್ಯ ಅವರು ಚುನಾವಣೆಯಲ್ಲಿ ಸೋತರೂ, ಅದೇ ಹುದ್ದೆಯಲ್ಲಿ ಅವರನ್ನು ಮುಂದುವರೆಸಲಾಗಿದೆ.</p>.<p>ಈ ಎಲ್ಲಾ ಸಮುದಾಯಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ, 2024ರ ಲೋಕಸಭಾ ಚುನಾವಣೆವರೆಗೂ ಈ ಸಮುದಾಯಗಳನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿಯೋಗಿ ಆದಿತ್ಯನಾಥ ಅಧಿಕಾರ ಸ್ವೀಕರಿಸಿದ್ದು, ಸಂಪುಟದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡಿದ್ದಾರೆ.</p>.<p>2024ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ,ಯೋಗಿ ಸಂಪುಟದಲ್ಲಿ ಬ್ರಾಹ್ಮಣರು, ಜಾಟರು, ಪರಿಶಿಷ್ಟ ಜಾತಿಗಳು, ಇತರೆ ಹಿಂದುಳಿದ ವರ್ಗಗಳಿಗೆ ಸಿಂಹಪಾಲು ಪ್ರಾತಿನಿಧ್ಯ ನೀಡಲಾಗಿದೆ.</p>.<p>ಮುಸ್ಲಿಮರು ಮತ್ತು ಪಂಜಾಬಿ ಸಮುದಾಯದವರಿಗೂ ಸಚಿವ ಸ್ಥಾನ ನೀಡುವ ಮೂಲಕ ಮುಂದಿನ ಚುನಾವಣೆ ವೇಳೆಗೆ ಜಾತಿ ಮತ್ತು ಧರ್ಮಗಳ ಸಮೀಕರಣಕ್ಕೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.</p>.<p>ವಿಧಾನಸಭಾ ಚುನಾವಣೆಗೂ ಮುನ್ನ ಈ ಸಮುದಾಯದ ನಾಯಕರು ಬಿಜೆಪಿಯಿಂದ ದೂರ ಸರಿದಿದ್ದರು. ಇವರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಮೂಲಕ ಈ ಸಮುದಾಯಗಳನ್ನು ಸಮಾಧಾನಪಡಿಸಲು ಬಿಜೆಪಿ ಮುಂದಾಗಿದೆ.</p>.<p>9 ಜನ ದಲಿತರು, 20 ಜನ ಹಿಂದುಳಿದ ವರ್ಗದವರು ಸೇರಿದಂತೆ ಮುಸ್ಲಿಂ ಹಾಗೂ ಪಂಜಾಬಿ ಸಮುದಾಯದ ತಲಾ ಒಬ್ಬರು ಯೋಗಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.</p>.<p>ಈ ಹಿಂದಿನ ಸಂಪುಟದಲ್ಲಿ ಕಾನೂನು ಸಚಿವರಾಗಿದ್ದ ಬ್ರಾಹ್ಮಣ ಸಮುದಾಯದ ಬ್ರಜೇಶ್ ಪಾಠಕ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಹಿಂದುಳಿದ ವರ್ಗಗಳ ಕೇಶವ ಪ್ರಸಾದ್ ಮೌರ್ಯ ಅವರು ಚುನಾವಣೆಯಲ್ಲಿ ಸೋತರೂ, ಅದೇ ಹುದ್ದೆಯಲ್ಲಿ ಅವರನ್ನು ಮುಂದುವರೆಸಲಾಗಿದೆ.</p>.<p>ಈ ಎಲ್ಲಾ ಸಮುದಾಯಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ, 2024ರ ಲೋಕಸಭಾ ಚುನಾವಣೆವರೆಗೂ ಈ ಸಮುದಾಯಗಳನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>