ಪಟ್ನಾ (ಬಿಹಾರ): ಇಲ್ಲಿನ ದಾನಪುರ ಪ್ರದೇಶದಲ್ಲಿ ಶುಕ್ರವಾರ ಗಂಗಾ ನದಿಯಲ್ಲಿ ದೋಣಿಗಳನ್ನು ಸೇರಿಸಿ ನಿರ್ಮಿಸಿದ ಸೇತುವೆಯ ಮೇಲಿನಿಂದ ಪಿಕ್ಅಪ್ ಜೀಪು ಉರುಳಿಬಿದ್ದು 9 ಮಂದಿ ಮೃತಪಟ್ಟಿದ್ದಾರೆ.
ವಾಹನದಲ್ಲಿ 13 ಮಂದಿ ಇದ್ದರು. ನಾಲ್ವರು ಈಜಿ ಪಾರಾಗಿದ್ದಾರೆ ಎಂದುಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.
ದಾನಪುರದ ಚಿತ್ರಕೂಟ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅಖಿಪುರಕ್ಕೆ ವಾಪಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಧುಮುಕಿತ್ತು.
ಎನ್ಡಿಆರ್ಎಫ್ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹ 4 ಲಕ್ಷ ಪರಿಹಾರ ಘೋಷಿಸಲಾಗಿದೆ.