<p class="title"><strong>ಅಮರಾವತಿ(ಪಿಟಿಐ):</strong> ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p class="title">ಬಸ್ನಲ್ಲಿ ಒಟ್ಟು 45 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನರು ಕೆಲವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊರತೆಗೆದರು. ಬಸ್ ನದಿಗೆ ಧುಮುಕಿದಾಗ ಕಿಟಕಿಯ ಗಾಜುಗಳು ತಗುಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p class="title">ಬಸ್ ತೆಲಂಗಾಣದ ಅಶ್ವರಾವ್ಪೇಟೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜಲ್ಲೇರು ನದಿಯ ಸೇತುವೆ ಮೇಲೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ದಾರಿ ಮಾಡಿಕೊಡಲು ಬಸ್ ಚಾಲಕ ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.</p>.<p class="title">‘ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಮರಾವತಿ(ಪಿಟಿಐ):</strong> ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p class="title">ಬಸ್ನಲ್ಲಿ ಒಟ್ಟು 45 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನರು ಕೆಲವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊರತೆಗೆದರು. ಬಸ್ ನದಿಗೆ ಧುಮುಕಿದಾಗ ಕಿಟಕಿಯ ಗಾಜುಗಳು ತಗುಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p class="title">ಬಸ್ ತೆಲಂಗಾಣದ ಅಶ್ವರಾವ್ಪೇಟೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜಲ್ಲೇರು ನದಿಯ ಸೇತುವೆ ಮೇಲೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ದಾರಿ ಮಾಡಿಕೊಡಲು ಬಸ್ ಚಾಲಕ ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.</p>.<p class="title">‘ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>