ದಿಲ್ಕುಶಾ ಪ್ರದೇಶದಲ್ಲಿನ ಸೇನಾ ಆವರಣದ ಹೊರಗಡೆ ಕೆಲವು ಕಾರ್ಮಿಕರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ಗುರುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಸೇನಾ ಆವರಣದ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ದಿಯಾ ತಿಳಿಸಿದ್ದಾರೆ.
ಬೆಳಗಿನ ಜಾವ 3 ಗಂಟೆಗೆ ನಾವು ಘಟನಾ ಸ್ಥಳಕ್ಕೆ ತಲುಪಿದೆವು. ಅವಶೇಷಗಳ ಅಡಿಯಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಮತ್ತು ಗಾಯಗೊಂಡವರ ಚಿಕಿತ್ಸೆಗೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
Uttar Pradesh CM Yogi Adityanath announces an ex-gratia of Rs 4 lakh for those who died and Rs 2 lakh for the treatment of the injured https://t.co/jCESWfT5re