<p class="title"><strong>ನವದೆಹಲಿ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 15 ವರ್ಷಕ್ಕಿಂತಲೂ ಹಳೆಯದಾದ ಸುಮಾರು 9 ಲಕ್ಷ ವಾಹನಗಳ ಬಳಕೆಯನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುವುದು. </p>.<p class="title">ಸೋಮವಾರ ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ‘ಈ ವಾಹನಗಳ ಬದಲಿಗೆ, ಪರ್ಯಾಯ ಇಂಧನ ಆಧಾರಿತ ನೂತನ ವಾಹನಗಳು ಬಳಕೆಯಾಗಲಿವೆ’ ಎಂದು ತಿಳಿಸಿದರು.</p>.<p>ಪರಿಸರ, ವಾಯು ಮಾಲಿನ್ಯಕ್ಕೆ ಕಾರಣವಾಗುವ ವಾಹನಗಳ ಬಳಕೆಯನ್ನು ಕೈಬಿಡುವುದು ಹಾಗೂ ಪರ್ಯಾಯ ಇಂಧನ ಆಧಾರಿತ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.</p>.<p>15 ವರ್ಷಕ್ಕಿಂತಲೂ ಹಳೆಯದಾದ ವಾಹನಗಳ ಬಳಕೆಯನ್ನು ಏಪ್ರಿಲ್ 1ರಿಂದ ಕೈಬಿಡಬೇಕು. ಈ ಆದೇಶವು ರಕ್ಷಣಾ ಇಲಾಖೆ ಮತ್ತು ಆಂತರಿಕ ಭದ್ರತೆಗೆ ಸಂಬಂಧಿತ ವಾಹನಗಳಿಗೆ ಅನ್ವಯವಾಗುವುದಿಲ್ಲ ಎಂದು ಭೂಸಾರಿಗೆ ಸಚಿವಾಲಯವು ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 15 ವರ್ಷಕ್ಕಿಂತಲೂ ಹಳೆಯದಾದ ಸುಮಾರು 9 ಲಕ್ಷ ವಾಹನಗಳ ಬಳಕೆಯನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುವುದು. </p>.<p class="title">ಸೋಮವಾರ ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ‘ಈ ವಾಹನಗಳ ಬದಲಿಗೆ, ಪರ್ಯಾಯ ಇಂಧನ ಆಧಾರಿತ ನೂತನ ವಾಹನಗಳು ಬಳಕೆಯಾಗಲಿವೆ’ ಎಂದು ತಿಳಿಸಿದರು.</p>.<p>ಪರಿಸರ, ವಾಯು ಮಾಲಿನ್ಯಕ್ಕೆ ಕಾರಣವಾಗುವ ವಾಹನಗಳ ಬಳಕೆಯನ್ನು ಕೈಬಿಡುವುದು ಹಾಗೂ ಪರ್ಯಾಯ ಇಂಧನ ಆಧಾರಿತ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.</p>.<p>15 ವರ್ಷಕ್ಕಿಂತಲೂ ಹಳೆಯದಾದ ವಾಹನಗಳ ಬಳಕೆಯನ್ನು ಏಪ್ರಿಲ್ 1ರಿಂದ ಕೈಬಿಡಬೇಕು. ಈ ಆದೇಶವು ರಕ್ಷಣಾ ಇಲಾಖೆ ಮತ್ತು ಆಂತರಿಕ ಭದ್ರತೆಗೆ ಸಂಬಂಧಿತ ವಾಹನಗಳಿಗೆ ಅನ್ವಯವಾಗುವುದಿಲ್ಲ ಎಂದು ಭೂಸಾರಿಗೆ ಸಚಿವಾಲಯವು ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>