<p><strong>ಲಖನೌ:</strong> ತೈಲ ಬೆಲೆ ಏರಿಕೆ ಬಗೆಗಿನ ಟೀಕೆಗಳನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ, ದೇಶದ ಶೇ95 ರಷ್ಟು ಮಂದಿ ಪೆಟ್ರೋಲ್ ಬಳಸುವುದಿಲ್ಲ ಎಂದು ಹೇಳಿದ್ದಾರೆ.</p>.<p>ಜಲೌನ್ನಲ್ಲಿಮಾಧ್ಯಮದವರೊಂದಿಗೆ ಮಾತನಾಡಿರುವ ಅವರು,ಸದ್ಯ ದೇಶದ ಜನರ ತಲಾದಾಯವನ್ನು 2014ರಲ್ಲಿದ್ದ ತಲಾದಾಯಕ್ಕೆ ಹೋಲಿಸಿದರೆ ವಾಸ್ತವದಲ್ಲಿ ಇಂಧನ ದರ ಅಷ್ಟೇನೂ ಏರಿಕೆಯಾಗಿಲ್ಲ ಎಂಬುದು ತಿಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.</p>.<p>ʼಇಂದು, ನಾಲ್ಕು ಚಕ್ರದ ವಾಹನಗಳನ್ನು ಮತ್ತು ಪೆಟ್ರೋಲ್ಬಳಸುವ ಕೆಲವೇ ಜನರು ಇದ್ದಾರೆ. ಸದ್ಯ ಶೇ 95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವಿಲ್ಲʼ ಎಂದಿದ್ದಾರೆ.</p>.<p>ದೇಶ ಬಹು ಭಾಗಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿರುವ ಹೊತ್ತಿನಲ್ಲಿ ತಿವಾರಿ ಈ ಹೇಳಿಕೆ ನೀಡಿದ್ದಾರೆ. ಕೇಂದ್ರದ ವಿರುದ್ಧ ಆರೋಪ ಮಾಡಲು ಪ್ರತಿಪಕ್ಷಗಳಿಗೆ ಬೇರೆ ಯಾವುದೇ ವಿಚಾರಗಳಿಲ್ಲ ಎಂದೂ ಹೇಳಿದ್ದಾರೆ.</p>.<p>ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಆಡಳಿತವನ್ನು ಉಲ್ಲೇಖಿಸಿ,ʼ2014ರ ಹಿಂದಿನ ಅಂಕಿ-ಅಂಶಗಳನ್ನು ನೀವು ನೋಡಬಹುದು. ಮೋದಿ ಮತ್ತು ಯೋಗಿ ಸರ್ಕಾರಗಳು ರಚನೆಯಾದ ನಂತರ ತಲಾದಾಯ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ.</p>.<p>ಇಂದು ತಲಾದಾಯ ದ್ವಿಗುಣಗೊಂಡಿದೆ. ಅದೇರೀತಿ, ಉಚಿತ ಶಿಕ್ಷಣ ಮತ್ತು ಕೋವಿಡ್ ಲಸಿಕೆ ನೀಡಲಾಗಿದೆ ಎನ್ನುವಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ತೈಲ ಬೆಲೆ ಏರಿಕೆ ಬಗೆಗಿನ ಟೀಕೆಗಳನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ, ದೇಶದ ಶೇ95 ರಷ್ಟು ಮಂದಿ ಪೆಟ್ರೋಲ್ ಬಳಸುವುದಿಲ್ಲ ಎಂದು ಹೇಳಿದ್ದಾರೆ.</p>.<p>ಜಲೌನ್ನಲ್ಲಿಮಾಧ್ಯಮದವರೊಂದಿಗೆ ಮಾತನಾಡಿರುವ ಅವರು,ಸದ್ಯ ದೇಶದ ಜನರ ತಲಾದಾಯವನ್ನು 2014ರಲ್ಲಿದ್ದ ತಲಾದಾಯಕ್ಕೆ ಹೋಲಿಸಿದರೆ ವಾಸ್ತವದಲ್ಲಿ ಇಂಧನ ದರ ಅಷ್ಟೇನೂ ಏರಿಕೆಯಾಗಿಲ್ಲ ಎಂಬುದು ತಿಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.</p>.<p>ʼಇಂದು, ನಾಲ್ಕು ಚಕ್ರದ ವಾಹನಗಳನ್ನು ಮತ್ತು ಪೆಟ್ರೋಲ್ಬಳಸುವ ಕೆಲವೇ ಜನರು ಇದ್ದಾರೆ. ಸದ್ಯ ಶೇ 95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವಿಲ್ಲʼ ಎಂದಿದ್ದಾರೆ.</p>.<p>ದೇಶ ಬಹು ಭಾಗಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿರುವ ಹೊತ್ತಿನಲ್ಲಿ ತಿವಾರಿ ಈ ಹೇಳಿಕೆ ನೀಡಿದ್ದಾರೆ. ಕೇಂದ್ರದ ವಿರುದ್ಧ ಆರೋಪ ಮಾಡಲು ಪ್ರತಿಪಕ್ಷಗಳಿಗೆ ಬೇರೆ ಯಾವುದೇ ವಿಚಾರಗಳಿಲ್ಲ ಎಂದೂ ಹೇಳಿದ್ದಾರೆ.</p>.<p>ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಆಡಳಿತವನ್ನು ಉಲ್ಲೇಖಿಸಿ,ʼ2014ರ ಹಿಂದಿನ ಅಂಕಿ-ಅಂಶಗಳನ್ನು ನೀವು ನೋಡಬಹುದು. ಮೋದಿ ಮತ್ತು ಯೋಗಿ ಸರ್ಕಾರಗಳು ರಚನೆಯಾದ ನಂತರ ತಲಾದಾಯ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ.</p>.<p>ಇಂದು ತಲಾದಾಯ ದ್ವಿಗುಣಗೊಂಡಿದೆ. ಅದೇರೀತಿ, ಉಚಿತ ಶಿಕ್ಷಣ ಮತ್ತು ಕೋವಿಡ್ ಲಸಿಕೆ ನೀಡಲಾಗಿದೆ ಎನ್ನುವಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>