ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 95 ರಷ್ಟು ಜನರಿಗೆ ಪೆಟ್ರೋಲ್‌ ಬೇಕಿಲ್ಲ: ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ

Last Updated 22 ಅಕ್ಟೋಬರ್ 2021, 1:31 IST
ಅಕ್ಷರ ಗಾತ್ರ

ಲಖನೌ: ತೈಲ ಬೆಲೆ ಏರಿಕೆ ಬಗೆಗಿನ ಟೀಕೆಗಳನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ, ದೇಶದ ಶೇ95 ರಷ್ಟು ಮಂದಿ ಪೆಟ್ರೋಲ್‌ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಜಲೌನ್‌ನಲ್ಲಿಮಾಧ್ಯಮದವರೊಂದಿಗೆ ಮಾತನಾಡಿರುವ ಅವರು,ಸದ್ಯ ದೇಶದ ಜನರ ತಲಾದಾಯವನ್ನು 2014ರಲ್ಲಿದ್ದ ತಲಾದಾಯಕ್ಕೆ ಹೋಲಿಸಿದರೆ ವಾಸ್ತವದಲ್ಲಿ ಇಂಧನ ದರ ಅಷ್ಟೇನೂ ಏರಿಕೆಯಾಗಿಲ್ಲ ಎಂಬುದು ತಿಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ʼಇಂದು, ನಾಲ್ಕು ಚಕ್ರದ ವಾಹನಗಳನ್ನು ಮತ್ತು ಪೆಟ್ರೋಲ್‌ಬಳಸುವ ಕೆಲವೇ ಜನರು ಇದ್ದಾರೆ. ಸದ್ಯ ಶೇ 95ರಷ್ಟು ಜನರಿಗೆ ಪೆಟ್ರೋಲ್‌ ಅಗತ್ಯವಿಲ್ಲʼ ಎಂದಿದ್ದಾರೆ.

ದೇಶ ಬಹು ಭಾಗಗಳಲ್ಲಿ ಪೆಟ್ರೋಲ್‌ ಬೆಲೆ ನೂರರ ಗಡಿ ದಾಟಿರುವ ಹೊತ್ತಿನಲ್ಲಿ ತಿವಾರಿ ಈ ಹೇಳಿಕೆ ನೀಡಿದ್ದಾರೆ. ಕೇಂದ್ರದ ವಿರುದ್ಧ ಆರೋಪ ಮಾಡಲು ಪ್ರತಿಪಕ್ಷಗಳಿಗೆ ಬೇರೆ ಯಾವುದೇ ವಿಚಾರಗಳಿಲ್ಲ ಎಂದೂ ಹೇಳಿದ್ದಾರೆ.

ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಆಡಳಿತವನ್ನು ಉಲ್ಲೇಖಿಸಿ,ʼ2014ರ ಹಿಂದಿನ ಅಂಕಿ-ಅಂಶಗಳನ್ನು ನೀವು ನೋಡಬಹುದು. ಮೋದಿ ಮತ್ತು ಯೋಗಿ ಸರ್ಕಾರಗಳು ರಚನೆಯಾದ ನಂತರ ತಲಾದಾಯ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ.

ಇಂದು ತಲಾದಾಯ ದ್ವಿಗುಣಗೊಂಡಿದೆ. ಅದೇರೀತಿ‌, ಉಚಿತ ಶಿಕ್ಷಣ ಮತ್ತು ಕೋವಿಡ್‌ ಲಸಿಕೆ ನೀಡಲಾಗಿದೆ ಎನ್ನುವಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT