ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ.
ಒಂದು ವಾರದಲ್ಲಿ 723 ಹೃದ್ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 98 ಜನರು ಮೃತಪಟ್ಟಿದ್ದಾರೆ. ಇದರಲ್ಲಿ 44 ಜನರು ಆಸ್ಪತ್ರೆಯಲ್ಲಿ ಮೃತಪಟ್ಟರೆ, 54 ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಮೃತಪಟ್ಟಿದ್ದಾರೆ.
ಪ್ರಸುತ್ತ ಉತ್ತರ ಭಾರತದ ಅನೇಕ ಕಡೆ ವಿಪರೀತ ಚಳಿಗಾಳಿ ಬೀಸುತ್ತಿದೆ. ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ವಯೋಮಾನದ ಜನರು ಮುನೆಚ್ಚರಿಕೆವಹಿಸಿಬೇಕೆಂದು ಹೃದ್ರೋಗ ವಿಭಾಗದ ನಿರ್ದೇಶಕ ವಿನಯ್ ಕೃಷ್ಣ ತಿಳಿಸಿದ್ದಾರೆ.