<p>ನವದೆಹಲಿ: ‘ಬಾಲಕಿ ಮತ್ತು ಆರೋಪಿ ನಡುವೆ ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಇರದಿದ್ದಾಗ ಪೋಕ್ಸೊ ಕಾಯ್ದೆಯಡಿ ಅದನ್ನು ಲೈಂಗಿಕ ದೌರ್ಜನ್ಯ ಎನ್ನಲಾಗದು’ ಎಂಬ ಬಾಂಬೆ ಹೈಕೋರ್ಟ್ನ ತೀರ್ಪನ್ನು ಅನೂರ್ಜಿತಗೊಳಿಸುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರೀಂಕೋರ್ಟ್ಗೆ ಮಂಗಳವಾರ ಮನವಿ ಮಾಡಿದರು.</p>.<p>ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಹಾಗೂ ಅಜಯ್ ರಸ್ತೋಗಿ ಅವರಿರುವ ನ್ಯಾಯಪೀಠಕ್ಕೆ ಈ ಮನವಿ ಮಾಡಿದ ಅವರು, ‘ಬಾಂಬೆ ಹೈಕೋರ್ಟ್ನ ಈ ತೀರ್ಪು ಅತಿರೇಕದ ಹಾಗೂ ಅಪಾಯಕಾರಿಯಾದ ಪೂರ್ವನಿದರ್ಶನವೆನಿಸುವುದು’ ಎಂದು ಪ್ರತಿಪಾದಿಸಿದರು.</p>.<p>‘ಒಬ್ಬ ವ್ಯಕ್ತಿ ಸರ್ಜಿಕಲ್ ಗ್ಲೌಸ್ಗಳನ್ನು ಹಾಕಿಕೊಂಡು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೂ, ಈ ತೀರ್ಪಿನ ಪ್ರಕಾರ ಆತ ಖುಲಾಸೆಯಾಗುತ್ತಾನೆ’ ಎಂದೂ ಅವರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 14ಕ್ಕೆ ಮುಂದೂಡಿತು.</p>.<p>ಬಾಲಕಿಯೊಬ್ಬಳ ಮೇಲೆ ಒಬ್ಬ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ನ ನಾಗಪುರ ಪೀಠದ ನ್ಯಾಯಮೂರ್ತಿ ಪುಷ್ಪಾ ಗಣೇದಿವಾಲಾ ನಡೆಸಿದ್ದರು.</p>.<p>‘ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೇಕಾದರೆ, ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಇರಬೇಕು’ ಎಂದು ಅಭಿಪ್ರಾಯಪಟ್ಟಿದ್ದ ಅವರು, ಆರೋಪಿಯನ್ನು ದೋಷಮುಕ್ತಗೊಳಿಸಿದ್ದರು. ಈ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಬಾಲಕಿ ಮತ್ತು ಆರೋಪಿ ನಡುವೆ ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಇರದಿದ್ದಾಗ ಪೋಕ್ಸೊ ಕಾಯ್ದೆಯಡಿ ಅದನ್ನು ಲೈಂಗಿಕ ದೌರ್ಜನ್ಯ ಎನ್ನಲಾಗದು’ ಎಂಬ ಬಾಂಬೆ ಹೈಕೋರ್ಟ್ನ ತೀರ್ಪನ್ನು ಅನೂರ್ಜಿತಗೊಳಿಸುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸುಪ್ರೀಂಕೋರ್ಟ್ಗೆ ಮಂಗಳವಾರ ಮನವಿ ಮಾಡಿದರು.</p>.<p>ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಹಾಗೂ ಅಜಯ್ ರಸ್ತೋಗಿ ಅವರಿರುವ ನ್ಯಾಯಪೀಠಕ್ಕೆ ಈ ಮನವಿ ಮಾಡಿದ ಅವರು, ‘ಬಾಂಬೆ ಹೈಕೋರ್ಟ್ನ ಈ ತೀರ್ಪು ಅತಿರೇಕದ ಹಾಗೂ ಅಪಾಯಕಾರಿಯಾದ ಪೂರ್ವನಿದರ್ಶನವೆನಿಸುವುದು’ ಎಂದು ಪ್ರತಿಪಾದಿಸಿದರು.</p>.<p>‘ಒಬ್ಬ ವ್ಯಕ್ತಿ ಸರ್ಜಿಕಲ್ ಗ್ಲೌಸ್ಗಳನ್ನು ಹಾಕಿಕೊಂಡು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೂ, ಈ ತೀರ್ಪಿನ ಪ್ರಕಾರ ಆತ ಖುಲಾಸೆಯಾಗುತ್ತಾನೆ’ ಎಂದೂ ಅವರು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 14ಕ್ಕೆ ಮುಂದೂಡಿತು.</p>.<p>ಬಾಲಕಿಯೊಬ್ಬಳ ಮೇಲೆ ಒಬ್ಬ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ನ ನಾಗಪುರ ಪೀಠದ ನ್ಯಾಯಮೂರ್ತಿ ಪುಷ್ಪಾ ಗಣೇದಿವಾಲಾ ನಡೆಸಿದ್ದರು.</p>.<p>‘ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬೇಕಾದರೆ, ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಇರಬೇಕು’ ಎಂದು ಅಭಿಪ್ರಾಯಪಟ್ಟಿದ್ದ ಅವರು, ಆರೋಪಿಯನ್ನು ದೋಷಮುಕ್ತಗೊಳಿಸಿದ್ದರು. ಈ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>