<p><strong>ಡೆಹ್ರಾಡೂನ್: </strong>ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ–ಚೀನಾ ಗಡಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭಾರಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ.</p>.<p>ನೀರ್ಗಲ್ಲು ಸ್ಫೋಟ ಸಂಭವಿಸಿರುವ ಬಗ್ಗೆ ಗಡಿ ರಸ್ತೆ ಕಾರ್ಯಪಡೆಯ ಕಮಾಂಡರ್ ಕರ್ನಲ್ ಮನೀಶ್ ಕಪಿಲ್ ಮಾಹಿತಿ ನೀಡಿದ್ದಾರೆ ಎಂದು ‘ಎಎನ್ಐ’ ಟ್ವೀಟ್ ಮಾಡಿದೆ.</p>.<p>ಚಮೋಲಿಯ ನೀತಿ ಕಣಿವೆಯ ಸುಮ್ನಾ ಪ್ರದೇಶದಲ್ಲಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/kedarnath-temple-to-reopen-to-devotees-on-may-17-badrinath-on-may-18-812468.html" itemprop="url">ಕೇದಾರನಾಥ ದೇವಾಲಯ ಮೇ 17ರಂದು ದರ್ಶನಕ್ಕೆ ಮುಕ್ತ</a></p>.<p>ಸಾವು–ನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.</p>.<p>ಫೆಬ್ರುವರಿಯಲ್ಲಿ ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಭವಿಸಿದ್ದ ನೀರ್ಗಲ್ಲು ಸ್ಫೋಟದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿ ಸಂಭವಿಸಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.</p>.<p><strong>ಓದಿ:</strong><a href="https://www.prajavani.net/india-news/death-toll-in-avalanche-in-uttarakhands-chamoli-rises-to-72-809116.html" itemprop="url">ಉತ್ತರಾಖಂಡ ಹಿಮಪಾತ: ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 72ಕ್ಕೆ ಏರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್: </strong>ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ–ಚೀನಾ ಗಡಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಭಾರಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ.</p>.<p>ನೀರ್ಗಲ್ಲು ಸ್ಫೋಟ ಸಂಭವಿಸಿರುವ ಬಗ್ಗೆ ಗಡಿ ರಸ್ತೆ ಕಾರ್ಯಪಡೆಯ ಕಮಾಂಡರ್ ಕರ್ನಲ್ ಮನೀಶ್ ಕಪಿಲ್ ಮಾಹಿತಿ ನೀಡಿದ್ದಾರೆ ಎಂದು ‘ಎಎನ್ಐ’ ಟ್ವೀಟ್ ಮಾಡಿದೆ.</p>.<p>ಚಮೋಲಿಯ ನೀತಿ ಕಣಿವೆಯ ಸುಮ್ನಾ ಪ್ರದೇಶದಲ್ಲಿ ನೀರ್ಗಲ್ಲು ಸ್ಫೋಟ ಸಂಭವಿಸಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/kedarnath-temple-to-reopen-to-devotees-on-may-17-badrinath-on-may-18-812468.html" itemprop="url">ಕೇದಾರನಾಥ ದೇವಾಲಯ ಮೇ 17ರಂದು ದರ್ಶನಕ್ಕೆ ಮುಕ್ತ</a></p>.<p>ಸಾವು–ನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.</p>.<p>ಫೆಬ್ರುವರಿಯಲ್ಲಿ ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಭವಿಸಿದ್ದ ನೀರ್ಗಲ್ಲು ಸ್ಫೋಟದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿ ಸಂಭವಿಸಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.</p>.<p><strong>ಓದಿ:</strong><a href="https://www.prajavani.net/india-news/death-toll-in-avalanche-in-uttarakhands-chamoli-rises-to-72-809116.html" itemprop="url">ಉತ್ತರಾಖಂಡ ಹಿಮಪಾತ: ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 72ಕ್ಕೆ ಏರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>