<p><strong>ಮುಂಬೈ</strong>: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣದ ಟರ್ಮಿನಸ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸುವ ಮೂಲಕ ರೈಲ್ವೆ ಅಧಿಕಾರಿಗಳಿಗೆ ತಲೆನೋವು ಉಂಟು ಮಾಡಿದ ಘಟನೆ ವರದಿಯಾಗಿದೆ.</p>.<p>ಆತ ಅರ್ಧ ಗಂಟೆ ಬಳಿಕ ಪ್ಲಾಟ್ಫ್ಲಾಮ್ನಲ್ಲಿ ನಿಂತಿದ್ದ ಗದಗ ಎಕ್ಸ್ಪ್ರೆಸ್ ರೈಲಿನ ಮೇಲೆ ಹಾರಿದ್ದಾನೆ. ಕೂಡಲೇ ಆತನನ್ನು ಬಂಧಿಸಲಾಗಿದೆ.</p>.<p>ಬಂಧಿತ ವ್ಯಕ್ತಿ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಸ್ ಮೇಲೇರಿದ್ದು, ಹೈಟೆನ್ಷನ್ ವೈರ್ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದಾನೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುನ್ನೆಚ್ಚರಿಕೆಯಾಗಿ ರೈಲ್ವೆ ಅಧಿಕಾರಿಗಳು ತಂತಿಗೆ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದರು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯಾವುದೇ ದುಡುಕಿನ ಕೃತ್ಯ ಎಸಗದಂತೆ ವ್ಯಕ್ತಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/india-news/daily-covid-cases-in-country-highest-in-149-days-1026543.html" itemprop="url">Covid-19: ಕಳೆದ 149 ದಿನಗಳಲ್ಲೇ ಗರಿಷ್ಠ ಪ್ರಕರಣ ದಾಖಲು </a></p>.<p> <a href="https://www.prajavani.net/india-news/gujarat-police-conduct-simultaneous-searches-at-17-jails-recover-phones-lethal-objects-1700-cops-1026438.html" itemprop="url">ಗುಜರಾತ್: ಏಕಕಾಲಕ್ಕೆ 17 ಜೈಲುಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣದ ಟರ್ಮಿನಸ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸುವ ಮೂಲಕ ರೈಲ್ವೆ ಅಧಿಕಾರಿಗಳಿಗೆ ತಲೆನೋವು ಉಂಟು ಮಾಡಿದ ಘಟನೆ ವರದಿಯಾಗಿದೆ.</p>.<p>ಆತ ಅರ್ಧ ಗಂಟೆ ಬಳಿಕ ಪ್ಲಾಟ್ಫ್ಲಾಮ್ನಲ್ಲಿ ನಿಂತಿದ್ದ ಗದಗ ಎಕ್ಸ್ಪ್ರೆಸ್ ರೈಲಿನ ಮೇಲೆ ಹಾರಿದ್ದಾನೆ. ಕೂಡಲೇ ಆತನನ್ನು ಬಂಧಿಸಲಾಗಿದೆ.</p>.<p>ಬಂಧಿತ ವ್ಯಕ್ತಿ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಸ್ ಮೇಲೇರಿದ್ದು, ಹೈಟೆನ್ಷನ್ ವೈರ್ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದಾನೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮುನ್ನೆಚ್ಚರಿಕೆಯಾಗಿ ರೈಲ್ವೆ ಅಧಿಕಾರಿಗಳು ತಂತಿಗೆ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದರು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯಾವುದೇ ದುಡುಕಿನ ಕೃತ್ಯ ಎಸಗದಂತೆ ವ್ಯಕ್ತಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/india-news/daily-covid-cases-in-country-highest-in-149-days-1026543.html" itemprop="url">Covid-19: ಕಳೆದ 149 ದಿನಗಳಲ್ಲೇ ಗರಿಷ್ಠ ಪ್ರಕರಣ ದಾಖಲು </a></p>.<p> <a href="https://www.prajavani.net/india-news/gujarat-police-conduct-simultaneous-searches-at-17-jails-recover-phones-lethal-objects-1700-cops-1026438.html" itemprop="url">ಗುಜರಾತ್: ಏಕಕಾಲಕ್ಕೆ 17 ಜೈಲುಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>