<p><strong>ನವದೆಹಲಿ: </strong>ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಅರ್ಹ ರೋಗಿಗಳ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ರಾಜ್ಯಸಭೆಯ ಸದಸ್ಯರು ಕೇಂದ್ರದ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ರಾಜ್ಯಸಭೆ ಸದಸ್ಯರಾದ ಎನ್ಸಿಪಿಯ ಡಾ.ಫೌಜಿಯಾ ಖಾನ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಸೇರಿದಂತೆ 23 ಜನ ಸಂಸದರ ನಿಯೋಗವು ಕೇಂದ್ರದ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರಿಗೆ ಈ ಕುರಿತ ಮನವಿ ಸಲ್ಲಿಸಿದೆ.</p>.<p>ಅಪರೂಪದಲ್ಲೇ ಅಪರೂಪದ್ದಾದ ಲೈಸೊಸೋಮಲ್ ಸ್ಟೋರೇಜ್ ಡಿಸಾರ್ಡರ್ಸ್ (ಎಲ್ಎಸ್ಡಿ)ನಂತಹ ಗುಂಪು 3 (ಎ) ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ತುರ್ತು ಚಿಕಿತ್ಸೆಯ ಅಗತ್ಯವಿದ್ದು, ಕೂಡಲೇ ಗಮನ ಹರಿಸಬೇಕು ಎಂದು ಸಚಿವರನ್ನು ಕೋರಲಾಗಿದೆ.</p>.<p>ಈ ಕಾಯಿಲೆಗೆ ಚಿಕಿತ್ಸೆ ನೀಡುವ ರಾಷ್ಟ್ರೀಯ ನೀತಿಯನ್ನು ಜಾರಿಗೊಳಿಸಿ ಕಳೆದ ಮಾರ್ಚ್ನಲ್ಲಿ ಅಧಿಸೂಚನೆ ಹೊರಡಿಸಿದ್ದರ ಹೊರತಾಗಿಯೂ, ಚಿಕಿತ್ಸೆಗೆ ಯಾವುದೇ ರೀತಿಯ ಧನಸಹಾಯ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಬ್ರೆಜಿಲ್, ಅರ್ಜೆಂಟಿನಾ, ಅಲ್ಜೀರಿಯಾ, ಈಜಿಪ್ತ್ ಮತ್ತಿತರ ರಾಷ್ಟ್ರಗಳಲ್ಲೂ ಇಂಥ ಕಾಯಿಲೆಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಈ ಕಾಯಿಲೆಗೆ ಅಗತ್ಯ ಚಿಕಿತ್ಸೆ ಭಾರತದಲ್ಲಿ ಲಭ್ಯವಿದ್ದು, ಹಣಕಾಸಿನ ನೆರವಿನ ಕೊರತೆ ಎದ್ದುಕಾಣುತ್ತಿದೆ. ದೇಶದಾದ್ಯಂತ ಅಂದಾಜು 200 ರೋಗಿಗಳು ಇಂಥ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ನೆರವಾಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಅರ್ಹ ರೋಗಿಗಳ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ರಾಜ್ಯಸಭೆಯ ಸದಸ್ಯರು ಕೇಂದ್ರದ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ರಾಜ್ಯಸಭೆ ಸದಸ್ಯರಾದ ಎನ್ಸಿಪಿಯ ಡಾ.ಫೌಜಿಯಾ ಖಾನ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಸೇರಿದಂತೆ 23 ಜನ ಸಂಸದರ ನಿಯೋಗವು ಕೇಂದ್ರದ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರಿಗೆ ಈ ಕುರಿತ ಮನವಿ ಸಲ್ಲಿಸಿದೆ.</p>.<p>ಅಪರೂಪದಲ್ಲೇ ಅಪರೂಪದ್ದಾದ ಲೈಸೊಸೋಮಲ್ ಸ್ಟೋರೇಜ್ ಡಿಸಾರ್ಡರ್ಸ್ (ಎಲ್ಎಸ್ಡಿ)ನಂತಹ ಗುಂಪು 3 (ಎ) ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ತುರ್ತು ಚಿಕಿತ್ಸೆಯ ಅಗತ್ಯವಿದ್ದು, ಕೂಡಲೇ ಗಮನ ಹರಿಸಬೇಕು ಎಂದು ಸಚಿವರನ್ನು ಕೋರಲಾಗಿದೆ.</p>.<p>ಈ ಕಾಯಿಲೆಗೆ ಚಿಕಿತ್ಸೆ ನೀಡುವ ರಾಷ್ಟ್ರೀಯ ನೀತಿಯನ್ನು ಜಾರಿಗೊಳಿಸಿ ಕಳೆದ ಮಾರ್ಚ್ನಲ್ಲಿ ಅಧಿಸೂಚನೆ ಹೊರಡಿಸಿದ್ದರ ಹೊರತಾಗಿಯೂ, ಚಿಕಿತ್ಸೆಗೆ ಯಾವುದೇ ರೀತಿಯ ಧನಸಹಾಯ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಬ್ರೆಜಿಲ್, ಅರ್ಜೆಂಟಿನಾ, ಅಲ್ಜೀರಿಯಾ, ಈಜಿಪ್ತ್ ಮತ್ತಿತರ ರಾಷ್ಟ್ರಗಳಲ್ಲೂ ಇಂಥ ಕಾಯಿಲೆಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಈ ಕಾಯಿಲೆಗೆ ಅಗತ್ಯ ಚಿಕಿತ್ಸೆ ಭಾರತದಲ್ಲಿ ಲಭ್ಯವಿದ್ದು, ಹಣಕಾಸಿನ ನೆರವಿನ ಕೊರತೆ ಎದ್ದುಕಾಣುತ್ತಿದೆ. ದೇಶದಾದ್ಯಂತ ಅಂದಾಜು 200 ರೋಗಿಗಳು ಇಂಥ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ನೆರವಾಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>