ದೆಹಲಿ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, 'ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ ಮತ್ತು ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದೇವೆ. ಆದರೆ, ಈ ಪ್ರಕರಣದಲ್ಲಿ ಸೋಮನಾಥ್ ಭಾರ್ತಿ ಅವರಿಗೆ ಅನ್ಯಾಯವಾಗಿದೆ ಎಂಬುದಾಗಿ ನಾವು ಭಾವಿಸುತ್ತೇವೆ' ಎಂದು ತಿಳಿಸಿದೆ.